Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:8 - ಕನ್ನಡ ಸತ್ಯವೇದವು J.V. (BSI)

8 ಈಗ ನೀವು ದೊಡ್ಡ ಗುಂಪಾಗಿರುವದರಿಂದಲೂ ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಬಸವ ಮೂರ್ತಿಗಳು ನಿಮ್ಮಲ್ಲಿರುವದರಿಂದಲೂ ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರೋಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿ ಕುರಿಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಯೆಹೋವನ ರಾಜ್ಯಕ್ಕೆ ವಿರುದ್ಧವಾಗಿ ನಿಂತು ಗೆಲ್ಲಬಹುದೆಂದು ನೆನಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ದಾವೀದನ ಮಕ್ಕಳು ಆಳುತ್ತಿರುವ ಯೆಹೋವನ ರಾಜ್ಯವನ್ನು ಸೋಲಿಸಲು ಈಗ ನೀವು ನಿರ್ಧರಿಸಿದ್ದೀರಿ. ನಿಮ್ಮಲ್ಲಿ ಅಧಿಕ ಸಂಖ್ಯೆಯ ಸೈನ್ಯವಿರಬಹುದು. ಯಾರೊಬ್ಬಾಮನು ನಿಮ್ಮ ದೇವರುಗಳಾಗಿ ಮಾಡಿಸಿದ ಬಂಗಾರದ ಬಸವ ಮೂರ್ತಿಗಳು ನಿಮ್ಮಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಈಗ ದಾವೀದನ ವಂಶಜರ ಕೈಯಲ್ಲಿರುವ ಯೆಹೋವ ದೇವರ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೊಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:8
15 ತಿಳಿವುಗಳ ಹೋಲಿಕೆ  

ಬಹಳವಾಗಿ ಆಲೋಚಿಸಿ ಕಡೆಯಲ್ಲಿ ಬಂಗಾರದ ಎರಡು ಬಸವ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲ್ಯರಿಗೆ - ನೀವು ಜಾತ್ರೆಗಾಗಿ ಯೆರೂಸಲೇವಿುಗೆ ಹೋದದ್ದು ಸಾಕಾಯಿತು; ಇಗೋ, ನಿಮ್ಮನ್ನು ಐಗುಪ್ತದಿಂದ ಕರತಂದ ದೇವರುಗಳು ಇಲ್ಲಿರುತ್ತವೆ ಎಂದು ಹೇಳಿ


ತಾವು ಏರ್ಪಡಿಸಿದ ಪೂಜಾಸ್ಥಳ ಅಜದೇವತೆ ಬಸವಮೂರ್ತಿ ಇವುಗಳಿಗೋಸ್ಕರ ಬೇರೆ ಪೂಜಾರಿಗಳನ್ನು ನೇವಿುಸಿಕೊಂಡದ್ದರಿಂದ ಅವರು ಗೋಮಾಳಗಳುಳ್ಳ ತಮ್ಮ ಸ್ವಾಸ್ತ್ಯಗಳನ್ನು ಬಿಟ್ಟು ಯೆಹೂದ ದೇಶಕ್ಕೂ ಯೆರೂಸಲೇವಿುಗೂ ಬಂದರು.


ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.


ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.


ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದ ದೆಸೆಯಿಂದ ಸುರಕ್ಷಿತನಾಗುವದಿಲ್ಲ.


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.


ಯೆಹೋವನೇ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿರುವಾತನು ನೀನಲ್ಲವೋ? ನೀನು ಜನಾಂಗಗಳ ಎಲ್ಲಾ ರಾಜ್ಯಗಳನ್ನು ಆಳುವವನಾಗಿರುತ್ತೀ. ನಿನ್ನ ಹಸ್ತದಲ್ಲಿ ಬಲಪರಾಕ್ರಮಗಳಿರುತ್ತವೆ; ನಿನ್ನೆದುರಿನಲ್ಲಿ ಯಾರೂ ನಿಲ್ಲಲಾರರು.


ನಿನ್ನನ್ನು ಮೆಚ್ಚಿ ತನ್ನ ಸನ್ನಿಧಿಯಲ್ಲಿ ಅರಸನಾಗುವದಕ್ಕೆ ನಿನ್ನನ್ನು ತನ್ನ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನಿನ್ನ ದೇವರು ಇಸ್ರಾಯೇಲ್ಯರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ; ನನ್ನನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ ಇನ್ನೊಂದನ್ನು ದಾನಿಗೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು