Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:15 - ಕನ್ನಡ ಸತ್ಯವೇದವು J.V. (BSI)

15 ಈ ಪ್ರಮಾಣದ ನಿವಿುತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾಕಡೆಗಳಲ್ಲಿಯೂ ಸಮಾಧಾನವನ್ನನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ಪ್ರಮಾಣದ ನಿಮಿತ್ತ ಯೆಹೂದ್ಯರೆಲ್ಲರಿಗೆ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಸರ್ವೇಶ್ವರನನ್ನು ಬಯಸಿದ ಕಾರಣ, ಸರ್ವೇಶ್ವರ ಅವರಿಗೆ ಪ್ರಸನ್ನರಾಗಿ ಎಲ್ಲಾ ಕಡೆಗಳಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದದ ಎಲ್ಲಾ ಜನರು ತಾವು ಯೆಹೋವನಿಗೆ ಮಾಡಿದ ಪ್ರಮಾಣದ ನಿಮಿತ್ತ ಸಂತೋಷಪಟ್ಟರು. ಯಾಕೆಂದರೆ ಅವರು ತಮ್ಮ ಪೂರ್ಣ ಹೃದಯದಿಂದ ಪ್ರಮಾಣಮಾಡಿದ್ದರು. ಅವರು ಯೆಹೋವನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಪ್ರಸನ್ನನಾಗಿ ಅವರಿಗೆ ಸಮಾಧಾನವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:15
31 ತಿಳಿವುಗಳ ಹೋಲಿಕೆ  

ಇವನು ಯೆಹೂದ್ಯರಿಗೆ - ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣಗೋಡೆ ಬುರುಜು ಬಾಗಲು ಅಗುಳಿ ಇವುಗಳಿಂದ ಭದ್ರಪಡಿಸೋಣ ಅನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿತೀರಿಸಿದರು.


ಇದಲ್ಲದೆ ಅವರು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪಿತೃಗಳ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಹೌದು, ಯೆಹೋವನೇ, ನಿನ್ನ ನ್ಯಾಯಕಾರ್ಯಗಳು ತೋರತಕ್ಕ ಮಾರ್ಗದಲ್ಲಿ ನಿನ್ನನ್ನು ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಕೇವಲ ಇಷ್ಟವಾಗಿದೆ.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹಧ್ವನಿ ಮಾಡಿರಿ.


ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ಆಕೆಯ ದಾರಿಗಳು ಸುಖಕರವಾಗಿವೆ, ಆಕೆಯ ಮಾರ್ಗಗಳೆಲ್ಲಾ ಸಮಾಧಾನವೇ.


ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ; ಅದನ್ನು ನೆರವೇರಿಸುವೆನು.


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ ಮನುಷ್ಯನಿಗಾಗಲಿ ಮಾಡುವದೆಲ್ಲಾ ಹೀಗೆಯೇ.


ಜನರೆಲ್ಲರೂ ಧರ್ಮೋಪದೇಶವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದದರಿಂದ ದೇಶಾಧಿಪತಿಯಾದ ನೆಹೆಮೀಯನೂ ಧರ್ಮೋಪದೇಶಮಾಡುವ ಯಾಜಕನಾದ ಎಜ್ರನೂ ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಅವರಿಗೆ - ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ಪರಿಶುದ್ಧದಿನವಾಗಿರುವದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ ಎಂದು ಹೇಳಿದರು.


ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃಸ್ಥಾಪಿತವಾಯಿತು. ಯಾರೂ ನೆನಸದೆ ಇರುವಲ್ಲಿ ದೇವರು ತಾನೇ ತನ್ನ ಪ್ರಜೆಗಳಿಗೋಸ್ಕರ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲಾ ಜನರೂ ಸಂತೋಷಿಸಿದರು.


ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರದ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದನು. ನೀವಾದರೋ ಸ್ಥಿರಚಿತ್ತರಾಗಿರಿ;


ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.


ಯೆಹೋವನು ಸುತ್ತಣ ವಿರೋಧಿಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹುದಿನಗಳು ಗತಿಸಿದ ಮೇಲೆ


ಆತನು ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲಾ ಸುಖಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯದಲ್ಲಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.


ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿಹೋಗುವಂತೆ ಇಸ್ರಾಯೇಲ್‍ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವದಕ್ಕೆ ಮನಸ್ಸುಳ್ಳವನಾಗಿದ್ದೇನೆ.


ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಆ ವರುಷಗಳಲ್ಲಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.


ತುತೂರಿಕೊಂಬುಗಳನ್ನೂದಿಸಿ ದೊಡ್ಡ ಆರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.


ಹೀಗೆ ದೇವಾನುಗ್ರಹದಿಂದ ಸುತ್ತಣ ವೈರಿಗಳ ಭಯತಪ್ಪಿ ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನವುಂಟಾಯಿತು.


ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ; ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಯಿ.


ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ನ್ಯಾಯವಿಧಿಗಳನ್ನೂ ವಿವರಿಸಲು ಜನರೆಲ್ಲರು - ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು ಎಂದು ಒಗ್ಗಟ್ಟಾಗಿ ಉತ್ತರ ಕೊಟ್ಟರು.


ಹೀಗೆ ಯೆಹೋಶುವನು ಶೆಕೆವಿುನಲ್ಲಿ ಇಸ್ರಾಯೇಲ್ಯರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ನ್ಯಾಯವಿಧಿಗಳನ್ನು ನೇವಿುಸಿದನು.


ಕಂಬದ ಬಳಿಯಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣಮಾಡಿದರು.


ಆತನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.


ಇಸ್ರಾಯೇಲ್ಯರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ದರ್ಶನವನ್ನು ಬಯಸುವವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ಯಜ್ಞವರ್ಪಿಸುವದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇವಿುಗೆ ಬಂದರು.


ಆದರೂ ನೀನು ದೇಶದೊಳಗಿಂದ ಅಶೇರವಿಗ್ರಹಸ್ತಂಭಗಳನ್ನು ತೆಗೆದುಹಾಕಿ ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟದ್ದರಿಂದ ನಿನ್ನಲ್ಲಿ ಸುಶೀಲತೆಯೂ ಉಂಟೆಂದು ತಿಳಿದುಬಂತು ಎಂಬದಾಗಿ ಹೇಳಿದನು.


ತನ್ನ ಸ್ಥಳದಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು