Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:8 - ಕನ್ನಡ ಸತ್ಯವೇದವು J.V. (BSI)

8 ಆಸನು ಓಬೇದನ [ಮಗನಾದ ಅಜರ್ಯನ] ಈ ಪ್ರವಾದನೋಕ್ತಿಗಳನ್ನು ಕೇಳಿದಾಗ ಧೈರ್ಯಗೊಂಡು ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದುಹಾಕಿ ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಆತನ ಯಜ್ಞವೇದಿಯನ್ನು ಜೀರ್ಣೋದ್ಧಾರಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಸನು ಓದೇದನ ಮಗ ಅಜರ್ಯನ ಈ ಪ್ರವಾದನೋಕ್ತಿಗಳನ್ನು ಕೇಳಿ ಧೈರ್ಯಗೊಂಡನು. ಜುದೇಯ ಹಾಗೂ ಬೆನ್ಯಾಮೀನ್ ಪ್ರಾಂತ್ಯಗಳಲ್ಲೂ ತಾನು ಸ್ವಾಧೀನಮಾಡಿಕೊಂಡಿದ್ದ ಎಫ್ರಯಿಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು; ಸರ್ವೇಶ್ವರನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಬಲಿಪೀಠವನ್ನು ದುರಸ್ತಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರವಾದಿಯಾದ ಓಬೇದನು ತಂದ ಸಂದೇಶವನ್ನು ಆಸನು ಕೇಳಿ ತುಂಬಾ ಪ್ರೋತ್ಸಾಹಗೊಂಡನು. ಅನಂತರ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯದಲ್ಲಿದ್ದ ಎಲ್ಲಾ ವಿಗ್ರಹಗಳನ್ನು ತೆಗೆದುಹಾಕಿಸಿದನು. ಗೆದ್ದಿದ್ದ ಎಫ್ರಾಯೀಮ್ ಬೆಟ್ಟಪ್ರದೇಶಗಳಲ್ಲಿದ್ದ ವಿಗ್ರಹಗಳನ್ನು ತೆಗೆದುಹಾಕಿಸಿದನು. ದೇವಾಲಯದ ಮಂಟಪದೆದುರು ಇದ್ದ ಯೆಹೋವನ ಯಜ್ಞವೇದಿಕೆಯನ್ನು ಸರಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:8
24 ತಿಳಿವುಗಳ ಹೋಲಿಕೆ  

ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.


ಆ ಕಾಲದಿಂದ ಸೊಲೊಮೋನನು, ತಾನು ಯೆಹೋವನಿಗೋಸ್ಕರ ಮಂಟಪದ ಮುಂದೆ ಕಟ್ಟಿಸಿದ


ಇದಲ್ಲದೆ ಅವನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.


ನೀವು ಬಂಡುತನ ದುರಾಶೆ ಕುಡಿಕತನ ದುಂದೌತಣ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಈ ಮೊದಲಾದವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವದರಲ್ಲಿಯೂ ಕಳೆದುಹೋದ ಕಾಲವೇ ಸಾಕು.


ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ ನಮ್ಮನ್ನು ಎದುರುಗೊಳ್ಳುವದಕ್ಕಾಗಿ ಕೆಲವರು ಅಪ್ಪಿಯಪೇಟೆಯವರೆಗೂ ಕೆಲವರು ತ್ರಿಛತ್ರವೆಂಬ ಸ್ಥಳದವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತೋತ್ರವನ್ನು ಮಾಡಿ ಧೈರ್ಯಗೊಂಡನು.


ಅಕಟಾ, ಎಲ್ಲಾ ಜಾತಿಯ ಕ್ರಿವಿುಕೀಟಗಳೂ ಅಸಹ್ಯಮೃಗಗಳೂ ಇಸ್ರಾಯೇಲ್‍ವಂಶದವರು ಪೂಜಿಸುವ ಸಕಲಮೂರ್ತಿಗಳೂ ಸುತ್ತಲೂ ಗೋಡೆಯಲ್ಲಿ ಚಿತ್ರಿಸಲ್ಪಟ್ಟಿದ್ದವು.


ಅವರ ಅಧರ್ಮಕ್ಕೂ ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ದೇಶವನ್ನು ಹೊಲಸು ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.


ಗುಪ್ತಸ್ಥಳಗಳಲ್ಲಿ ರಾತ್ರಿಕಳೆಯುತ್ತಾ ಹಂದಿಯ ಬಾಡು ತಿನ್ನುತ್ತಾ ಅಸಹ್ಯಪದಾರ್ಥಗಳ ಸಾರನ್ನು ತಮ್ಮ ಗಂಗಳಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರು,


ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು, ವನವೃಕ್ಷಗಳಲ್ಲಿ ಒಂದನ್ನು ತನಗೋಸ್ಕರ ಸಲಹುವನು; ಅವನು ಪೀತದಾರವನ್ನು ನೆಡಲು ಮಳೆಯು ಅದನ್ನು ಬೆಳೆಯಿಸುವದು.


ಆಮೇಲೆ ಅವರು ಅರಮನೆಯೊಳಕ್ಕೆ ಹೋಗಿ ಅರಸನಾದ ಹಿಜ್ಕೀಯನಿಗೆ - ನಾವು ಯೆಹೋವನ ಸಮಸ್ತಾಲಯವನ್ನೂ ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಅದರ ಸಾಮಾನುಗಳನ್ನೂ ಶುದ್ಧಮಾಡಿದೆವು.


ಇಗೋ, ಯೆಹೋವನ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯಕಾರ್ಯ ಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದಕುಲಪ್ರಭುವೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನ ಲೇಖಕರು; ಧೈರ್ಯದಿಂದ ಕೆಲಸಮಾಡಿರಿ, ಯೆಹೋವನು ಸಜ್ಜನರ ಸಹಾಯಕನು ಎಂದು ಹೇಳಿದನು.


ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯವಿಗ್ರಹಗಳಿಗೋಸ್ಕರ ಯೆರೂಸಲೇವಿುನ ಎದುರಿನಲ್ಲಿಯೂ ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.


ಒಂದು ವೇಳೆ ನೀವು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಯೆರೂಸಲೇವಿುನ ಯಜ್ಞವೇದಿಯ ಮುಂದೆಯೇ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಇದಲ್ಲದೆ ಯೆಹೋವನ ಆಲಯಕ್ಕೂ ತನ್ನ ವೇದಿಗೂ ಮಧ್ಯದಲ್ಲಿದ್ದು ಆವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರವೇದಿಯನ್ನು ಆಲಯದ ಎದುರಿನಿಂದ ತೆಗೆಯಿಸಿ ತನ್ನ ವೇದಿಯ ಉತ್ತರ ದಿಕ್ಕಿನಲ್ಲಿಡಿಸಿ


ಅವನು ಯೆರೂಸಲೇವಿುನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿ


ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹವೂ ಲೋಹ ವಿಗ್ರಹವೂ ಯೆಹೋವನಿಗೆ ಹೇಯವಾದದ್ದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನಾದರೂ ಶಾಪಗ್ರಸ್ತ ಅನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಆದದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡಿಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು.


ಇವನು ಯೆಹೂದದ ಕೋಟೆಕೊತ್ತಲಗಳುಳ್ಳ ಎಲ್ಲಾ ಪಟ್ಟಣಗಳಲ್ಲಿಯೂ ಸೈನ್ಯವನ್ನಿರಿಸಿ ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ಕಿತ್ತುಕೊಂಡಿದ್ದ ಎಫ್ರಾಯೀಮ್ಯರ ಪಟ್ಟಣದಲ್ಲಿಯೂ ಅಧಿಕಾರಿಗಳನ್ನು ನೇವಿುಸಿದನು.


ಯೆಹೋಷಾಫಾಟನು ಯೆರೂಸಲೇವಿುನಲ್ಲಿ ವಾಸವಾಗಿದ್ದು ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದವರೆಗೂ ಸಂಚರಿಸಿ ತನ್ನ ಪ್ರಜೆಗಳನ್ನು ಅವರ ಪಿತೃಗಳ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.


ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.


ಇಸ್ರಾಯೇಲ್ಯರ ಅರಸನಾದ ಯಾರೊಬ್ಬಾಮನ ಆಳಿಕೆಯ ಇಪ್ಪತ್ತನೆಯ ವರುಷದಲ್ಲಿ ಆಸನು ಯೆಹೂದದ ಅರಸನಾದನು.


ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು