Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:14 - ಕನ್ನಡ ಸತ್ಯವೇದವು J.V. (BSI)

14 ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಬುಕ್ಕಿಟ್ಟುಗಾರರ ಕಸಬಿನ ಮೇರೆಗೆ ವಿುಶ್ರಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು ಅವನು ತನಗೋಸ್ಕರ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಅವನಿಗೋಸ್ಕರ ಬಹುಧೂಪವನ್ನು ಸುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನ ಶರೀರವನ್ನು ವೈದ್ಯರ ಆಲೋಚನೆ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರಹದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗೋಸ್ಕರ ದಾವೀದನಗರದಲ್ಲಿ ತೆಗೆಸಿದ್ದ ಸಮಾಧಿಯಲ್ಲಿ ಇಟ್ಟರು. ಹೇರಳವಾಗಿ ಅವನಿಗೋಸ್ಕರ ಬಹಳಷ್ಟು ಧೂಪ ಹಾಕಿ ಸಂತಾಪ ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನ ಶವವನ್ನು ಬುಕ್ಕಿಟ್ಟುಗಾರನ ಕಸಬಿನ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗಾಗಿ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಹೇರಳವಾಗಿ ಧೂಪಹಾಕಿ ಸಂತಾಪ ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳಧೂಪವನ್ನು ಸುಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:14
14 ತಿಳಿವುಗಳ ಹೋಲಿಕೆ  

ಕಾಲಾಂತರದಲ್ಲಿ ಅಂದರೆ ಸುಮಾರು ಎರಡು ವರುಷಗಳಾದ ಮೇಲೆ ಆ ರೋಗದಿಂದ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗೋಸ್ಕರ ಧೂಪಹಾಕಿದ ಪ್ರಕಾರ ಅವನಿಗೆ ಹಾಕಲಿಲ್ಲ.


ತರುವಾಯ ಅವನು ತನ್ನ ಸೇವಕರಾದ ವೈದ್ಯರಿಗೆ - ನನ್ನ ತಂದೆಯ ಶವವನ್ನು ಸುಗಂಧದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ ಎಂದು ಅಪ್ಪಣೆಕೊಡಲು ಅವರು ಹಾಗೆಯೇ ಮಾಡಿದರು.


ನಿನಗಿಂತ ಮುಂಚಿನ ನಿನ್ನ ಪಿತೃಗಳಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ಸಬ್ಬತ್‍ದಿನ ಕಳೆದ ಮೇಲೆ, ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಆತನ ದೇಹಕ್ಕೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡರು.


ಇಲ್ಲಿ ನಿನಗೇನು? ಇಲ್ಲಿ ನಿನಗೆ ಯಾರಿದ್ದಾರೆ? ಇಲ್ಲಿ ನಿನಗಾಗಿ ಗೋರಿಯನ್ನು ತೋಡಿಸಿಕೊಂಡಿದ್ದೀಯಾ? ಎತ್ತರದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ ಬಂಡೆಯನ್ನು ಕಡೆಯಿಸಿ ನಿನಗೆ ನಿವಾಸವನ್ನು ಮಾಡಿಸುತ್ತಾ ಇದ್ದೀಯೋ?


ಸತ್ತ ನೊಣಗಳಿಂದ ಗಂದಿಗನ ತೈಲವು ಕೊಳೆತು ನಾರುವದು; ಹಾಗೆಯೇ ಹುಚ್ಚುತನ ಸ್ವಲ್ಪವಾದರೂ ಜ್ಞಾನಮಾನಗಳನ್ನು ಮುಚ್ಚಿ ಮೀರುವದು.


ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇವಿುಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಶ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.


ಅವರಲ್ಲಿದ್ದ ಶೂರರೆಲ್ಲರೂ ಹೊರಟು ರಾತ್ರಿಯೆಲ್ಲಾ ನಡೆದುಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.


ಅವನು ತನ್ನ ಆಳಿಕೆಯ ನಾಲ್ವತ್ತೊಂದನೆಯ ವರುಷದಲ್ಲಿ ತೀರಿಕೊಂಡು


ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇವಿುನಲ್ಲಿರುವ ಅವನ ತಂದೆಯ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು.


ಹಿಜ್ಕೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬಶ್ಮಶಾನ ಭೂವಿುಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು