Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:10 - ಕನ್ನಡ ಸತ್ಯವೇದವು J.V. (BSI)

10 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ [ತಲೆಗೆ ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬದಾಗಿ ಯೆಹೋವನು ಹೇಳುತ್ತಾನೆ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ, ಎಂಬುದಾಗಿ ಸರ್ವೇಶ್ವರ ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚಿದ್ಕೀಯನು ಕೆನಾನನ ಮಗ. ಚಿದ್ಕೀಯನು ಕಬ್ಬಿಣದ ಕೊಂಬುಗಳನ್ನು ತಯಾರಿಸಿ, “ಇದು ಯೆಹೋವನ ನುಡಿ. ಈ ಕಬ್ಬಿಣದ ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ನಾಶಮಾಡುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:10
15 ತಿಳಿವುಗಳ ಹೋಲಿಕೆ  

ಯನ್ನ ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಆ ಮನುಷ್ಯರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಬುದ್ಧಿಗೆಟ್ಟವರೂ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರೂ ಆಗಿದ್ದಾರೆ.


ಅಲ್ಲಿನ ಪ್ರವಾದಿಗಳು ಇವರಿಗಾಗಿ ವಿುಥ್ಯಾದರ್ಶನವನ್ನೂ ಸುಳ್ಳು ಕಣಿಯನ್ನೂ ಕಂಡು ಯೆಹೋವನು ಮಾತಾಡದಿದ್ದರೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.


ನಾನು ಮಾತಾಡದೆಹೋದರೂ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ವಿುಥ್ಯ, ನೀವು ಹೇಳಿದ ಕಣಿಯು ಸುಳ್ಳು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ - ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು;


ಇದೇ ಯೆಹೋವನ ನುಡಿ - ನೀನು ಕಣ್ಣಿನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು


ಆಹಾ, ತಮ್ಮ ನಾಲಿಗೆಗಳನ್ನು ಚಾಚಿ ಯೆಹೋವನು ನುಡಿಯುತ್ತಾನೆ ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.


ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ತಾವೇ ಪ್ರವಾದಿಸಿದರು.


ನನ್ನನ್ನು ಅಸಡ್ಡೆಮಾಡುವವರಿಗೆ - ನಿಮಗೆ ಶುಭವಾಗುವದು ಎಂಬದಾಗಿ ಯೆಹೋವನು ಅಂದಿದ್ದಾನೆ ಎಂದು ಹೇಳುತ್ತಲೇ ಇದ್ದಾರೆ; ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ - ನಿಮಗೆ ಯಾವ ಕೇಡೂ ಸಂಭವಿಸದು ಎಂದು ನುಡಿಯುತ್ತಾರೆ.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ [ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂದನು.


ಇಸ್ರಾಯೇಲ್ಯರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯಪಟ್ಟಣದ ಹೆಬ್ಬಾಗಲಿನ ಹತ್ತಿರವಿರುವ ಬೈಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕೂತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡುತ್ತಾ ಇದ್ದರು.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು - ರಾಮೋತ್‍ಗಿಲ್ಯಾದಿಗೆ ಹೋಗು; ನೀನು ಕೃತಾರ್ಥನಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು