Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:11 - ಕನ್ನಡ ಸತ್ಯವೇದವು J.V. (BSI)

11 ಇಗೋ, ಯೆಹೋವನ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯಕಾರ್ಯ ಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದಕುಲಪ್ರಭುವೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನ ಲೇಖಕರು; ಧೈರ್ಯದಿಂದ ಕೆಲಸಮಾಡಿರಿ, ಯೆಹೋವನು ಸಜ್ಜನರ ಸಹಾಯಕನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಗೋ, ಸರ್ವೇಶ್ವರನ ಕಾರ್ಯಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಮಹಾಯಾಜಕ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯ ಕಾರ್ಯಗಳ ಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಲೇಖಕರು. ಧೈರ್ಯದಿಂದ ಕೆಲಸಮಾಡಿ. ಸರ್ವೇಶ್ವರಸ್ವಾಮಿ ಸಜ್ಜನರ ಸಹಾಯಕರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಅಮರ್ಯನು ನಿಮ್ಮ ಪ್ರಧಾನಯಾಜಕನು. ಯೆಹೋವನ ಕಾರ್ಯಗಳಿಗೆಲ್ಲಾ ಅವನೇ ನಿಮಗೆ ಪ್ರಮುಖನು. ಯೆಹೋವನ ಕುರಿತಾದ ಸಂಗತಿಗಳ ಬಗ್ಗೆ ಜೆಬದ್ಯನು ಪ್ರಮುಖನಾಗಿರುವನು. ಅವನು ಯೆಹೂದ ಕುಲದ ಇಷ್ಮಾಯೇಲನ ಮಗ. ಲೇವಿಯರು ನಿಮಗಾಗಿ ಬರವಣಿಗೆಯ ಕೆಲಸವನ್ನು ಮಾಡುವರು. ನೀವು ಮಾಡುವ ಕಾರ್ಯಗಳಲ್ಲಿ ಧೈರ್ಯಶಾಲಿಗಳಾಗಿರಿ. ಯೆಹೋವನು ನೀತಿವಂತರೊಂದಿಗಿರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಮುಖ್ಯಯಾಜಕನಾದ ಅಮರ್ಯನು ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಯೆಹೂದದ ಮನೆಯ ನಾಯಕನಾಗಿರುವ ಇಷ್ಮಾಯೇಲನ ಮಗ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇರುವರು. ಇದಲ್ಲದೆ ಲೇವಿಯರು ನಿಮ್ಮ ಮುಂದೆ ಅಧಿಕಾರಿಗಳಾಗಿರುವರು. ನೀವು ಬಲಗೊಂಡು ಕೆಲಸ ನಡೆಸಿರಿ. ಯೆಹೋವ ದೇವರು ಒಳ್ಳೆಯವರ ಸಂಗಡ ಇರುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:11
28 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದವರೊಡನೆ ಯೆರೂಸಲೇವಿುಗೆ ಹಿಂದಿರುಗಿ ಬಂದು ಲೇವಿಯರಿಂದಲೂ ಯಾಜಕರಿಂದಲೂ ಇಸ್ರಾಯೇಲ್‍ಗೋತ್ರ ಪ್ರಧಾನರಿಂದಲೂ ಕೆಲವರನ್ನು ಆರಿಸಿ ಯೆಹೋವ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರಿಸುವದಕ್ಕೋಸ್ಕರ ಯೆರೂಸಲೇವಿುನಲ್ಲಿ ಇರಿಸಿ ಅವರಿಗೆ -


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ಅರಿಮಥಾಯವೆಂಬ ಯೆಹೂದ್ಯರದೊಂದು ಪಟ್ಟಣದ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಸೇಫನು. ಅವನು ಹಿರೀಸಭೆಯವನು, ಉತ್ತಮನು, ಸತ್ಪುರುಷನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು; ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಕ್ಕೂ ಸಮ್ಮತಿ ಪಟ್ಟಿರಲಿಲ್ಲ.


ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಒಳ್ಳೆಯವರ ನಡತೆಯನ್ನು ಅನುಸರಿಸುವಂತೆ [ವಿವೇಕವು] ನಿನ್ನನ್ನು ಪ್ರೇರಿಸಿ ನೀತಿವಂತರ ಹಾದಿಗಳನ್ನು ಹಿಡಿಯುವ ಹಾಗೆ [ಮಾಡುವದು].


ದಯಾಳುವಾಗಿ ಧನಸಹಾಯಮಾಡುವವನೂ ತನ್ನ ಕಾರ್ಯಗಳನ್ನು ನೀತಿಯಿಂದ ನಡಿಸುವವನೂ ಭಾಗ್ಯವಂತನು.


ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.


ನೀವು ಹೇಗೆ ಕೆಲಸನಡಿಸುತ್ತೀರಿ ಎಂಬದರ ವಿಷಯ ನೋಡಿಕೊಳ್ಳಿರಿ. ನೀವು ನ್ಯಾಯತೀರಿಸುವದು ಮನುಷ್ಯರಿಗೋಸ್ಕರವಲ್ಲ, ಯೆಹೋವನಿಗೋಸ್ಕರವೇ. ನ್ಯಾಯವಿಚಾರಣೆ ನಡೆಯುವಾಗ ಆತನು ನಿಮ್ಮ ಮಧ್ಯದಲ್ಲಿರುತ್ತಾನೆ.


ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.


ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.


ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮಪ್ರಾಂತಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವಾಕಾರ್ಯಗಳನ್ನೂ ರಾಜಕೀಯ ಕಾರ್ಯಗಳನ್ನೂ ನಡಿಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಮಂದಿ.


ಆದದರಿಂದ ನೀವು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವನ ದರ್ಶನವನ್ನು ಬಯಸಿರಿ. ಏಳಿರಿ, ನಿಮ್ಮ ದೇವರಾದ ಯೆಹೋವನ ಪವಿತ್ರಾಲಯವನ್ನು ಕಟ್ಟಿರಿ. ಯೆಹೋವನ ನಿಬಂಧನ ಮಂಜೂಷವನ್ನೂ ದೇವಾರಾಧನಸಾಮಗ್ರಿಗಳನ್ನೂ ಯೆಹೋವನ ಹೆಸರಿಗೋಸ್ಕರ ಕಟ್ಟಲ್ಪಡುವ ಮಂದಿರದಲ್ಲಿ ಇಡಿರಿ ಎಂದು ಹೇಳಿದನು.


ಶಿಲ್ಪಿಗರೂ ಬಡಗಿಯವರೂ ಬಂಗಾರ ಬೆಳ್ಳಿ ತಾಮ್ರ ಕಬ್ಬಿಣಗಳ ಎಲ್ಲಾ ತರದ ಕೆಲಸವನ್ನು ಮಾಡುವದರಲ್ಲಿ ಜಾಣರೂ ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವದಕ್ಕಾಗುವದಿಲ್ಲ. ಏಳು, ಕೆಲಸಕ್ಕೆ ಕೈಹಾಕು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿದನು.


ನನ್ನ ಮಗನೇ, ನೀನು ಕೃತಾರ್ಥನಾಗುವಂತೆಯೂ ನಿನ್ನ ದೇವರಾದ ಯೆಹೋವನು ನಿನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟುವಂತೆಯೂ ಆತನು ನಿನ್ನ ಸಂಗಡ ಇರಲಿ.


ಅಜರ್ಯನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆದನು;


ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ; ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುತ್ತಾನೆ ಎಂದು ಹೇಳಿದನು.


ನಿನ್ನನ್ನು ಕೈಬಿಡುವದಿಲ್ಲ, ತೊರೆಯುವದಿಲ್ಲ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಯಾಕಂದರೆ ನಾನು ಈ ಜನರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶವನ್ನು ಇವರಿಗೆ ನೀನೇ ಸ್ವಾಧೀನಪಡಿಸಬೇಕು.


ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳು ನೂರು ಮಂದಿ. ಅರಸನಾದ ದಾವೀದನು ರೂಬೇನ್ ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕಕಾರ್ಯಗಳಲ್ಲಿಯೂ ರಾಜಕೀಯಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇವಿುಸಿದನು.


ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು ಎಂದು ಹೇಳಿದನು.


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲ್ಲಾಜಾರನ ಮಗನು; ಇವನು ಪ್ರಧಾನ ಯಾಜಕನಾದ ಆರೋನನ ಮಗನು.


ಯೆಹೋವನು ಹೀಗೆ ನುಡಿಯುತ್ತಾನೆ - ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವವು, ಆ ಸನ್ಮಾರ್ಗವು ಎಲ್ಲಿ ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವದು (ಎಂದು ನಾನು ಅಪ್ಪಣೆಕೊಟ್ಟಾಗ) ಅದರಲ್ಲಿ ನಾವು ನಡೆಯುವದೇ ಇಲ್ಲವೆಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು