Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:7 - ಕನ್ನಡ ಸತ್ಯವೇದವು J.V. (BSI)

7 ಹೀಗಿರಲು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಇವುಗಳ ಕೆಲಸಮಾಡುವದರಲ್ಲಿಯೂ ಧೂಮ್ರ ರಕ್ತ ನೀಲವರ್ಣಗಳ ಬಟ್ಟೆಯನ್ನು ನೇಯುವದರಲ್ಲಿಯೂ ಚಿತ್ರ ಕೆತ್ತುವದರಲ್ಲಿಯೂ ಜಾಣನಾದ ಮನುಷ್ಯನನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯು ಗೊತ್ತು ಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇರುವಂಥ ಜಾಣರೊಂದಿಗೆ ಅವನು ಕೆಲಸಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೀಗಿರಲು, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಮಾಡುವುದರಲ್ಲಿ, ಊದಾ, ಕೆಂಪು, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿ ಹಾಗೂ ಚಿತ್ರ ಕೆತ್ತುವುದರಲ್ಲಿ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆ ಗೊತ್ತುಮಾಡಿದಂಥ ಮತ್ತು ನನ್ನೊಡನೆ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇರುವಂಥ ಕಲಾಕುಶಲರೊಂದಿಗೆ ಅವನು ಕೆಲಸಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಗಳಲ್ಲಿ ಪಳಗಿರುವ ಒಬ್ಬ ಕುಶಲಕರ್ಮಿಯನ್ನು ನೀನು ಕಳುಹಿಸಿಕೊಡಬೇಕು. ಅವನಿಗೆ ನೀಲಿ, ಕೆಂಪು, ನೇರಳೆ ವರ್ಣಗಳ ಬಟ್ಟೆಗಳನ್ನು ನೇಯುವುದೂ ಗೊತ್ತಿರಬೇಕು. ನನ್ನ ತಂದೆ ಆರಿಸಿಕೊಂಡಿರುವ ಕುಶಲಕರ್ಮಿಗಳ ಜೊತೆಯಲ್ಲಿ ಅವನು ಜೆರುಸಲೇಮಿನಲ್ಲಿಯೂ ಯೆಹೂದದಲ್ಲಿಯೂ ಕೆಲಸ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಆದ್ದರಿಂದ ಬಂಗಾರದಲ್ಲಿಯೂ, ಬೆಳ್ಳಿಯಲ್ಲಿಯೂ, ಕಂಚಿನಲ್ಲಿಯೂ, ಕಬ್ಬಿಣದಲ್ಲಿಯೂ, ರಕ್ತವರ್ಣ, ಲೋಹಿತ ವರ್ಣ, ನೀಲ ವರ್ಣಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನನ್ನು, ನನ್ನ ತಂದೆ ದಾವೀದನು ಸಿದ್ಧಮಾಡಿದ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ನನ್ನ ಬಳಿಯಲ್ಲಿರುವ ಕುಶಲಕರ್ಮಿಗಳ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿ ಇರುವವನನ್ನು ನನ್ನ ಬಳಿಗೆ ಕಳುಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:7
9 ತಿಳಿವುಗಳ ಹೋಲಿಕೆ  

ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಕಟ್ಟುವರು, ಅವರ ಅರಸರು ನಿನ್ನನ್ನು ಸೇವಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದುಬಿಟ್ಟು ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.


ಈ ವಿವೇಕವು ಸಹ ಅತಿಶಯಾಲೋಚನಾಪರನೂ ಸುಜ್ಞಾನಶ್ರೇಷ್ಠನೂ ಆಗಿರುವ ಸೇನಾಧೀಶ್ವರನಾದ ಯೆಹೋವನಿಂದಲೇ ಉಂಟಾಗುತ್ತದೆ.


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದುತ್ತಾನೆ.


ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ತೂರ್‍ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು ಅವನ ಎಲ್ಲಾ ಕೆಲಸವನ್ನು ಮಾಡಿದನು.


ಹೀರಾಮನ ಹಡಗುಗಳು ಓಫೀರ್‍ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.


ಸೆನೀರಿನ ತುರಾಯಿಮರದಿಂದ ನಿನ್ನ ಪಕ್ಕಗಳ ಹಲಿಗೆಗಳನ್ನು ಮಾಡಿ ನಿನ್ನ ಸ್ತಂಭವನ್ನು ರಚಿಸುವದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು