Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:12 - ಕನ್ನಡ ಸತ್ಯವೇದವು J.V. (BSI)

12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:12
24 ತಿಳಿವುಗಳ ಹೋಲಿಕೆ  

ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.


ಕರ್ತನೇ, ಯೆಹೋವನೇ, ನನ್ನ ದೃಷ್ಟಿ ನಿನ್ನಲ್ಲಿದೆ; ನಿನ್ನನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡ.


ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.


ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.


ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ನಿನ್ನ ಸಾನ್ನಿಧ್ಯದಿಂದ ಬಿಸಾಡಲ್ಪಟ್ಟಿದ್ದೇನೆ ಅಂದುಕೊಂಡೆನು; ಆದರೂ ನಿನ್ನ ಪರಿಶುದ್ಧಾಲಯವನ್ನು ಪುನಃ ದರ್ಶನಮಾಡುವೆನು.


ಆಗ ಆ ಸ್ತ್ರೀಯು - ಸಮೀಪಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸನು ತಾನಾಗಿ ನೋಡಿಕೊಳ್ಳುವನೆಂಬದಾಗಿ ನನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ಪ್ರಮಾಣಮಾಡಬೇಕು ಎಂದು ಬೇಡಿಕೊಂಡಳು. ಅದಕ್ಕೆ ಅರಸನು - ಯೆಹೋವನಾಣೆ, ನಿನ್ನ ಮಗನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡುವದಿಲ್ಲ ಎಂದು ಹೇಳಿದನು.


ತನ್ನ ಮಕ್ಕಳು ದೇವದೂಷಕರೆಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿವಿುತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲ್ಯರಿಗೂ ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ ಎಂದು ಹೇಳಿಸಿದನು.


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ಯೆಹೋವನು ಎಲ್ಲಾ ಜನಾಂಗಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.


ಜನಾಂಗಗಳು ಎಚ್ಚರಗೊಂಡು ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಲಿ; ಅಲ್ಲೇ ಸುತ್ತಣ ಜನಾಂಗಗಳಿಗೆಲ್ಲಾ ನ್ಯಾಯತೀರಿಸಲು ಆಸೀನನಾಗುವೆನು.


ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವದನ್ನು ಕಂಡು ತನ್ನ ಯಜಮಾನನಿಗೆ - ಅಯ್ಯೋ, ಸ್ವಾಮೀ, ಏನು ಮಾಡೋಣ ಎಂದನು.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಆತನು ದೇಶದೇಶಗಳ ವ್ಯಾಜ್ಯಗಳನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ [ಆಯುಧಗಳನ್ನು] ಕುಲುಮೆಗೆ ಹಾಕಿ ಕತ್ತಿಗಳನ್ನು ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು; ಜನಾಂಗವು ಜನಾಂಗಕ್ಕೆ ವಿರುದ್ಧವಾಗಿ ಕತ್ತಿಯನ್ನೆತ್ತದು, ಇನ್ನು ಯುದ್ಧಾಭ್ಯಾಸವು ನಡೆಯುವದೇ ಇಲ್ಲ.


ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದು ಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು


ಎಲ್ಲಾ ಯೆಹೂದ್ಯರೂ ಅವರ ಹೆಂಡತಿಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ನನ್ನ ಒಡೆಯನೂ ಅರಸನೂ ಆದ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನೀನೇ ಗೊತ್ತುಮಾಡಬೇಕೆಂದು ಇಸ್ರಾಯೇಲ್ಯರೆಲ್ಲರೂ ಕಾದುಕೊಂಡಿರುತ್ತಾರೆ.


ಲೋಕದ ನ್ಯಾಯಾಧಿಪತಿಯೇ, ಏಳು; ಗರ್ವಿಷ್ಠರಿಗೆ ಪ್ರತಿಫಲವನ್ನು ಕೊಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು