Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:24 - ಕನ್ನಡ ಸತ್ಯವೇದವು J.V. (BSI)

24 ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಯೆಹೂದ್ಯರು ಮರುಭೂಮಿಯ ಬುರುಜಿಗೆ ಬಂದು ಆ ಸೈನ್ಯಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೆಹೂದದ ಸೈನ್ಯದವರು ಅರಣ್ಯದಲ್ಲಿ ಶತ್ರು ಸೈನ್ಯವನ್ನು ವೀಕ್ಷಿಸುವ ಸ್ಥಳಕ್ಕೆ ಬಂದಾಗ ಸೈನ್ಯವನ್ನು ಕಾಣದೆ ರಾಶಿಯಾಗಿ ಬಿದ್ದಿದ್ದ ಹೆಣಗಳನ್ನೇ ಕಂಡರು; ಯಾರೂ ಜೀವದಿಂದುಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಯೆಹೂದದವರು ಮರುಭೂಮಿಯಲ್ಲಿರುವ ಎತ್ತರದ ಸ್ಥಳಕ್ಕೆ ಬಂದು, ಅಲ್ಲಿನ ಗುಂಪನ್ನು ನೋಡಿದಾಗ, ಅವರಲ್ಲಿ ಒಬ್ಬನೂ ಉಳಿಯದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:24
10 ತಿಳಿವುಗಳ ಹೋಲಿಕೆ  

ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪರೋಷಭರಿತನಾದ ನಾನೇ ಇವರನ್ನು ಹತಿಸುವೆನು.


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ ಹೆಣಗಳಿಂದ ಅದನ್ನು ತುಂಬಿಸುವನು.


ಹೀಗಿರುವಲ್ಲಿ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿ ಬಿಡುವಿಯಲ್ಲವೋ?


ಅವರ ಹಿಂಡುಗಳನ್ನು ಅಂದರೆ ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಇವುಗಳನ್ನೂ ಲಕ್ಷ ಜನವನ್ನೂ ಕೊಳ್ಳೆಹಿಡಿದು ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಗೆ ತಪ್ಪಿಸಿದನು. ಐಗುಪ್ತ್ಯರು ಸತ್ತು ಸಮುದ್ರತೀರದಲ್ಲಿ ಬಿದ್ದಿರುವದನ್ನು ಇಸ್ರಾಯೇಲ್ಯರು ಕಂಡರು.


ಅವರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವದಕ್ಕೆ ಪ್ರಾರಂಭಿಸಿದರು.


ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವದಕ್ಕೋಸ್ಕರ ಅಲ್ಲಿಗೆ ಹೋಗಲು ಅವರಿಗೆ ದ್ರವ್ಯ ವಸ್ತ್ರ ಶ್ರೇಷ್ಠಾಯುಧ ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲುಕೊಂಡರು. ಕೊಳ್ಳೆಯು ಬಲುಹೆಚ್ಚಾಗಿದ್ದದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.


ನೀರು ಮೊದಲಿನಂತೆ ಬಂದು ಆ ರಥಗಳನ್ನೂ ರಾಹುತರನ್ನೂ ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಣುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರಮಂದಿ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡುವಲ್ಲಿ ಪಾಳೆಯತುಂಬಾ ಹೆಣಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು