Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:33 - ಕನ್ನಡ ಸತ್ಯವೇದವು J.V. (BSI)

33 ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರ ಮನಸ್ಸು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ನಾಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಅವನು ಉನ್ನತಸ್ಥಳಗಳನ್ನು ನಿರ್ಮೂಲಗೊಳಿಸಲಿಲ್ಲ. ಯೆಹೂದದ ಜನರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಪೂರ್ಣ ಮನಸ್ಸಿಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಜನರು ಅವರ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸ್ಥಿರ ಮಾಡಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:33
11 ತಿಳಿವುಗಳ ಹೋಲಿಕೆ  

ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದದೇಶದಲ್ಲಿದ್ದ ಪೂಜಾಸ್ಥಳಗಳನ್ನೂ ಅಶೇರವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು.


ಆದರೂ ನೀನು ದೇಶದೊಳಗಿಂದ ಅಶೇರವಿಗ್ರಹಸ್ತಂಭಗಳನ್ನು ತೆಗೆದುಹಾಕಿ ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟದ್ದರಿಂದ ನಿನ್ನಲ್ಲಿ ಸುಶೀಲತೆಯೂ ಉಂಟೆಂದು ತಿಳಿದುಬಂತು ಎಂಬದಾಗಿ ಹೇಳಿದನು.


ಅವನು ಯೆಹೋವನನ್ನು ಅನುಸರಿಸುವದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.


ಪಿತೃಗಳ ದೇವರಾದ ನಿನ್ನನ್ನು ಹುಡುಕಬೇಕೆಂದು ಮನಸ್ಸು ಮಾಡಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದ್ದರಿಂದ


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡಿಸಿ ಅಶೇರವಿಗ್ರಹಸ್ತಂಭಗಳನ್ನು ಕಡಿಸಿಬಿಟ್ಟು ಯೆಹೂದ್ಯರಿಗೆ -


ಆಗ ಸಮುವೇಲನು ಅವರಿಗೆ - ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರಿಗಿಕೊಂಡಿರುವದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ; ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು ಅಂದನು.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಯೆಹೋವನು ಇಂದಿನವರೆಗೂ ನಿಮಗೆ ಅನುಗ್ರಹಿಸಲಿಲ್ಲ ಅಯ್ಯೋ.


ಇವನು ತಪ್ಪದೆ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ


ಸಮಸ್ತ ಪ್ರಜೆಗಳಿಗೂ ಮಾಡಿದ ಮಹಾಮನಶ್ಶೋಧನೆ ಉತ್ಪಾತ ಮಹತ್ಕಾರ್ಯಗಳನ್ನು ನೀವು ನೋಡೇನೋಡಿದ್ದೀರಷ್ಟೆ.


ಇಸ್ರಾಯೇಲ್‍ಪ್ರಾಂತದಲ್ಲಿದ್ದ ಪೂಜಾಸ್ಥಳಗಳು ತೆಗೆದುಹಾಕಲ್ಪಡದಿದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.


ಅವರು ಈ ಪ್ರಕಾರ ದೇವರಾದ ಯೆಹೋವನೊಬ್ಬನಿಗೇ ಯಜ್ಞವನ್ನು ಅರ್ಪಿಸುವವರಾದರೂ ಆ ಯಜ್ಞಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು