Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:37 - ಕನ್ನಡ ಸತ್ಯವೇದವು J.V. (BSI)

37 ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧವಾಗಿ - ನೀನು ಅಹಜ್ಯನೊಡನೆ ಒಡಂಬಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳುಮಾಡುವನು ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದುಹೋದದ್ದರಿಂದ ತಾರ್ಷೀಷಿಗೆ ಹೊರಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆಗ ಮಾರೇಷಾ ಊರಿನ ದೋದಾವಾಹುವಿನ ಮಗ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧವಾಗಿ, “ನೀನು ಅಹಜ್ಯನೊಡನೆ ಒಪ್ಪಂದಮಾಡಿಕೊಂಡಿದ್ದರಿಂದ ಸರ್ವೇಶ್ವರ ನಿನ್ನ ಕೆಲಸವನ್ನು ಹಾಳುಮಾಡುವರು,” ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದುಹೋದುದರಿಂದ ತಾರ್ಷೀಷಿಗೆ ಹೊರಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆಗ ಎಲಿಯೇಜರನು ಯೆಹೋಷಾಫಾಟನ ವಿರುದ್ಧವಾಗಿ ಪ್ರವಾದಿಸಿದನು. ಅವನು ದೋದಾವಾಹುವಿನ ಮಗನು. ಅವನು ಮಾರೇಷ ಎಂಬ ಪಟ್ಟಣದವನಾಗಿದ್ದನು. ಅವನು, “ಯೆಹೋಷಾಫಾಟನೇ, ನೀನು ಅಹಜ್ಯನೊಂದಿಗೆ ಸೇರಿಕೊಂಡಿರುವೆ. ಇದಕ್ಕಾಗಿ ಯೆಹೋವನು ನಿನ್ನ ಕೆಲಸಗಳನ್ನು ನಾಶಮಾಡುವನು” ಎಂದು ಹೇಳಿದನು. ಅವನ ಹಡಗುಗಳು ಸಮುದ್ರದಲ್ಲಿ ಒಡೆದುಹೋದದ್ದರಿಂದ ಅವುಗಳು ತಾರ್ಷೀಷಿಗೆ ಹೋಗಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಮಾರೇಷಾ ಊರಿನ ದೋದವಾಹುವಿನ ಮಗನಾದ ಎಲೀಯೆಜೆರನು ಯೆಹೋಷಾಫಾಟನಿಗೆ ವಿರೋಧವಾಗಿ ಪ್ರವಾದಿಸಿ, “ನೀನು ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡಿದ್ದರಿಂದ, ಯೆಹೋವ ದೇವರು ನೀನು ಮಾಡಿದವುಗಳನ್ನು ನಾಶಮಾಡುವರು,” ಎಂದು ಹೇಳಿದನು. ಅದರಂತೆಯೇ, ಆ ಹಡಗುಗಳು ತಾರ್ಷೀಷಿಗೆ ಹೋಗದೆ ಒಡೆದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:37
12 ತಿಳಿವುಗಳ ಹೋಲಿಕೆ  

ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ ಬೆಳ್ಳಿ ದಂತ ಕಪಿ ನವಿಲು ಇವುಗಳನ್ನು ತರುತ್ತಿದ್ದವು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸುತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.


ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಅವರು ತಾರ್ಷೀಷಿಗೆ ಹೋಗುವದಕ್ಕಾಗಿ ಹಡಗುಗಳನ್ನು ಕಟ್ಟಬೇಕೆಂದು ಒಡಂಬಡಿಕೆಮಾಡಿಕೊಂಡು ಅವುಗಳನ್ನು ಎಚ್ಯೋನ್ಗೆಬೆರಿನಲ್ಲಿ ಕಟ್ಟಿಸಿದರು.


ಯೆಹೋಷಾಫಾಟನು ಪಿತೃಗಳ ಬಳಿಗೆ ಸೇರಿ ದಾವೀದನಗರದಲ್ಲಿ ಪೂರ್ವಿಕರ ಶ್ಮಶಾನಭೂವಿುಯಲ್ಲಿ ಸಮಾಧಿಹೊಂದಿದ ಮೇಲೆ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು