Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:11 - ಕನ್ನಡ ಸತ್ಯವೇದವು J.V. (BSI)

11 ಮತ್ತು ಅವನು ಯೆಹೂದದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಯೆರೂಸಲೇವಿುನವರನ್ನು ದೇವದ್ರೋಹಮಾಡುವಂತೆ ಪ್ರೇರಿಸಿ ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಯೆಹೂದದ ಗುಡ್ಡಗಳಲ್ಲಿ, ಪೂಜಾ ಸ್ಥಳಗಳನ್ನು ಏರ್ಪಡಿಸಿ ಯೆರೂಸಲೇಮಿನವರನ್ನು ದೈವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋರಾಮನು ಯೆಹೂದ ರಾಜ್ಯದ ಬೆಟ್ಟಗಳ ಮೇಲೆ ಪೂಜಾಸ್ಥಳಗಳನ್ನು ಕಟ್ಟಿಸಿದನು. ಪ್ರಜೆಗಳು ದೇವರ ಚಿತ್ತಕ್ಕನುಸಾರವಾಗಿ ನಡೆಯದಂತೆ ಅವರನ್ನು ಯೆಹೋವನಿಂದ ದೂರಕ್ಕೆ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:11
28 ತಿಳಿವುಗಳ ಹೋಲಿಕೆ  

ನಾನಂತೂ ಆ ಮನುಷ್ಯನಿಗೂ ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆಮಾಡಿದವರೆಲ್ಲರನ್ನೂ ಕುಲದಿಂದ ತೆಗೆದುಹಾಕುವೆನು.


ಅವನು ಯೆರೂಸಲೇವಿುನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.


ಅಯ್ಯೋ, ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ ನಿನ್ನ ನೆರೆಯವರಿಗೆ ಕುಡಿಸಿ ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ನಿನ್ನ ಗತಿಯನ್ನು ಏನು ಹೇಳಲಿ!


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.


ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.


ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ ವಿಗ್ರಹಗಳಿಂದ ರೇಗಿಸಿದರು.


ಆದರೆ ಯೆಹೂದ್ಯರೂ ಯೆರೂಸಲೇವಿುನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲ್ಯರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಪ್ರೇರಿಸಿದಿ; ಮತ್ತು ನಿನ್ನ ತಂದೆಯ ಕುಟುಂಬಕ್ಕೆ ಸೇರಿ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದಿ;


ಯೆಹೂದ್ಯರ ಅರಸನಾದ ಮನಸ್ಸೆಯು ಮುಂಚೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡಿಸಿದದರಿಂದಲೂ ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದದರಿಂದಲೂ


ಯೋರಾಮನು ಅವನನ್ನು ಕಂಡ ಕೂಡಲೆ - ಯೇಹುವೇ, ಶುಭವೋ ಎಂದು ಅವನನ್ನು ಕೇಳಿದನು. ಅದಕ್ಕೆ ಅವನು - ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವದು ಎಂದು ಉತ್ತರಕೊಟ್ಟನು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ; ನನ್ನನ್ನು ಉಲ್ಲಂಘಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ಅದಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಕನ್ನಿಕೆಗಳನ್ನು ತೆಗೆದುಕೊಳ್ಳುವದಕ್ಕೆ ಆಸ್ಪದವುಂಟಾಗುವದು; ತರುವಾಯ ಆ ಸೊಸೆಯರು ತೌರಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.


ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ ನನ್ನನ್ನು ಹೀನೈಸಿ ನಡಿಸಿದ ಅಪರಾಧಗಳ ಪ್ರತಿಫಲವನ್ನು ಇವರ ಮಡಲಿಗೆ ಹಾಕುವೆನು; ಹೌದು, ಇವರ ಕಾರ್ಯದ ಫಲವನ್ನು ಅಳತೆಗೆ ಸರಿಯಾಗಿ ಮೊಟ್ಟಮೊದಲೇ ಇವರ ಮಡಲಿಗೆ ಸುರಿಯುವೆನು ಎಂದು ಯೆಹೋವನು ಹೇಳುತ್ತಾನೆ.


ಭ್ರಷ್ಟಳಾದ ಇಸ್ರಾಯೇಲು ಹಾದರಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ ಅಂಜದೆ ತಾನೂ ಹೋಗಿ ಸೂಳೆತನವನ್ನು ನಡಿಸಿದಳು.


ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು ಅಕ್ಕನ ಸೂಳೆತನಕ್ಕಿಂತ ಹೆಚ್ಚಾದ ಸೂಳೆತನವನ್ನು ನಡಿಸಿ ಅವಳನ್ನು ಮೀರಿ ಬಲುಕೆಟ್ಟವಳಾದಳು.


ಇಸ್ರಾಯೇಲೇ, ನೀನು ಸೂಳೆಯಾಗಿ ನಡೆದರೂ ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ; [ಯೆಹೂದ್ಯರೇ,] ಗಿಲ್ಗಾಲಿಗೆ ನೆರೆಯದಿರಿ, ಬೇತಾವೆನಿಗೆ ಯಾತ್ರೆ ಹೋಗಬೇಡಿರಿ, ಯೆಹೋವನ ಜೀವದಾಣೆ ಎಂದು ಶಪಥಮಾಡಬಾರದು.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣ ಗಾಳಿಯೇ; ಅದು ಮೋಸವನ್ನೂ ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡಿಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು [ಕಾಣಿಕೆಯಾಗಿ] ಕಳುಹಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು