Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 23:13 - ಕನ್ನಡ ಸತ್ಯವೇದವು J.V. (BSI)

13 ಅಲ್ಲಿ ಅರಸನು ಬಾಗಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನರ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 23:13
23 ತಿಳಿವುಗಳ ಹೋಲಿಕೆ  

ಮನುಷ್ಯನೋ ತನ್ನ ಕಾಲಗತಿಯನ್ನು ತಿಳಿಯನಷ್ಟೆ; ಮೀನುಗಳು ಕೆಟ್ಟ ಬಲೆಗೂ ಪಕ್ಷಿಗಳು ಜಾಲಕ್ಕೂ ಸಿಕ್ಕಿಬೀಳುವ ಹಾಗೆ ನರಜನ್ಮದವರು ತಮ್ಮ ಮೇಲೆ ತಟ್ಟನೆ ಬೀಳುವ ಕೆಟ್ಟ ಕಾಲಪಾಶಕ್ಕೆ ಸಿಕ್ಕಿಕೊಳ್ಳುವರು.


ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ; ದುಷ್ಟನ ಆಳಿಕೆ ಜನರಿಗೆ ನರಳಾಟ.


ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ; ದುರ್ಜನರು ಹಾಳಾದರೆ ಜಯಘೋಷ.


ಫಕ್ಕನೆ ಅವರು ಭಯಭ್ರಾಂತರಾಗುವರು; ಯಾಕಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.


ತನ್ನ ಸ್ಥಳದಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣ ಮಾಡಿದನು.


ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯಮಾಡುವ ಎಲ್ಲಾ ಲೇವಿಯರೂ ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದರು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು.


ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ, ಎಲೀಯೆಜೆರ್ ಎಂಬ ಯಾಜಕರು ತುತೂರಿಗಳನ್ನು ಊದುತ್ತಾ ದೇವಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್, ಯೆಹೀಯ ಎಂಬವರು ಮಂಜೂಷಾಲಯದ ದ್ವಾರಪಾಲಕರು.


ಇದಲ್ಲದೆ ಇಸ್ಸಾಕಾರ್ ಜೆಬುಲೂನ್ ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತಗಳವರು ಎತ್ತು, ಕತ್ತೆ, ಹೇಸರಕತ್ತೆ, ಒಂಟೆ ಇವುಗಳ ಮೇಲೆ ಆಹಾರಪದಾರ್ಥಗಳನ್ನು ಹೇರಿಕೊಂಡು ಬಂದರು. ಅವರು ತಂದವುಗಳಾವವಂದರೆ - ತರತರದ ರೊಟ್ಟಿ, ಅಂಜೂರ ಹಣ್ಣಿನ ಉಂಡೆ, ಒಣಗಿದ ದ್ರಾಕ್ಷೇಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವೇ. ಇಸ್ರಾಯೇಲ್ಯರೊಳಗೆ ಮಹಾ ಸಂತೋಷವಿತ್ತಷ್ಟೆ.


ಕಂಬದ ಬಳಿಯಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣಮಾಡಿದರು.


ಒಡನೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ - ಅಹಜ್ಯನೇ, ಇದು ಒಳಸಂಚು ಎಂದು ಹೇಳಿ ಓಡಿಹೋದನು.


ಕೂಡಲೆ ಅವರು ಅವನಿಗೋಸ್ಕರ ಮೆಟ್ಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಆರ್ಭಟಿಸಿದರು.


ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ವಿುದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳುಕೊಂಡಿತ್ತು.


ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು; ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆಯು ಬಟ್ಟೆಗಳನ್ನು ಹರಿದುಕೊಂಡು - ದ್ರೋಹ, ದ್ರೋಹ ಎಂದು ಕೂಗಿದಳು.


ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಕೂಡಿದ್ದ ಯೆಹೋವನ ಆಲಯಕ್ಕೆ ಬಂದಳು.


ಆಗ ಯಾಜಕನಾದ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರಕೊಂಡು ಹೋಗಿ ಅವರಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು.


ಪ್ರಭುವು ಹೊರಗಣ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು ತಾನು ಒಪ್ಪಿಸಿದ ಸರ್ವಾಂಗಹೋಮಪಶುವನ್ನೂ ಸಮಾಧಾನಯಜ್ಞಪಶುಗಳನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು