Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:14 - ಕನ್ನಡ ಸತ್ಯವೇದವು J.V. (BSI)

14 ಕೆಲಸ ತೀರಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ ಯಜ್ಞಾರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮ ಸಮರ್ಪಣೆಯಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಸರ್ವೇಶ್ವರನ ಆಲಯದಲ್ಲಿ ನಡೆವ ಆರಾಧನೆಗೆ ಹಾಗು ಬಲಿಯರ್ಪಣೆಗೆ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ, ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಆಲಯದಲ್ಲಿ ಪ್ರತಿನಿತ್ಯವೂ ದಹನಬಲಿ ಸಮರ್ಪಣೆ ಆಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೆಲಸಗಾರರು ತಮ್ಮ ಕೆಲಸವು ಮುಗಿದ ಬಳಿಕ ಉಳಿದ ಹಣವನ್ನು ಅರಸನಾದ ಯೆಹೋವಾಷನಿಗೆ ಮತ್ತು ಯೆಹೋಯಾದನಿಗೆ ತಂದುಕೊಟ್ಟರು. ಆ ಹಣವನ್ನು ದೇವಾಲಯದ ಉಪಕರಣಗಳನ್ನು ಮಾಡಿಸಲು ಉಪಯೋಗಿಸಿದರು. ಅವು ದೇವಾಲಯದೊಳಗಿನ ಸೇವೆಗೂ ಸರ್ವಾಂಗಹೋಮಕ್ಕೂ ಉಪಯುಕ್ತವಾಗಿದ್ದವು. ಮಾತ್ರವಲ್ಲದೆ ಬೆಳ್ಳಿಬಂಗಾರಗಳಿಂದ ಬೋಗುಣಿ ಮತ್ತು ಇತರ ವಸ್ತುಗಳನ್ನು ಮಾಡಿದರು. ಯೆಹೋಯಾದನು ಜೀವದಿಂದಿರುವ ತನಕ ಪ್ರತೀ ದಿವಸ ಸರ್ವಾಂಗಹೋಮವನ್ನರ್ಪಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:14
13 ತಿಳಿವುಗಳ ಹೋಲಿಕೆ  

ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ ಮೂರ್ಖತನವು ಅವನಿಂದ ತೊಲಗದು.


ಚೊಕ್ಕ ಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಗೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು ಇವೇ.


ಯೆಹೋವನು ಆಜ್ಞಾಪಿಸಿದ ಕೆಲಸಕ್ಕೆ ಬೇಕಾದದ್ದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿರುತ್ತಾರೆಂದು ಹೇಳಲಾಗಿ ಮೋಶೆ -


ಕೆಲಸಮಾಡುವವರು ಬಹುಪ್ರಯಾಸ ಪಡುತ್ತಿದ್ದದರಿಂದ ಜೀರ್ಣೋದ್ಧಾರದ ಕೆಲಸವು ಮುಂದರಿಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.


ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರುಷದವನಾಗಿದ್ದನು.


ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ವ್ಯವಸಾಯಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಗೆ ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.


ನಿಯವಿುತ ಸಂಖ್ಯೆಗೆ ಸರಿಯಾಗಿ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವದೂ ಇವೇ.


ಇದಲ್ಲದೆ ಅವನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೂರಾಮನಿಗೆ - ನನ್ನ ತಂದೆಯಾದ ದಾವೀದನು ತನ್ನ ವಾಸಕ್ಕೋಸ್ಕರ ಅರಮನೆಯನ್ನು ಕಟ್ಟಿಸಿಕೊಳ್ಳುವದಕ್ಕಾಗಿ ನೀನು ಅವನಿಗೆ ದೇವದಾರುಮರಗಳನ್ನು ಕಳುಹಿಸಿದಿಯಲ್ಲಾ.


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇವಿುಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು