Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 24:16 - ಕನ್ನಡ ಸತ್ಯವೇದವು J.V. (BSI)

16 ಅವನು ಇಸ್ರಾಯೇಲ್ಯರ ವಿಷಯದಲ್ಲಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಶ್ಮಶಾನದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ಇಸ್ರಯೇಲರ ವಿಷಯದಲ್ಲೂ ದೇವರ ಮತ್ತು ದೇವಾಲಯದ ವಿಷಯದಲ್ಲೂ ಹಲವಾರು ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದ ನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನ ದೇಹವನ್ನು ದಾವೀದ ನಗರದಲ್ಲಿ ಅರಸುಗಳ ಸಮಾಧಿಯ ಬಳಿಯಲ್ಲಿ ಸಮಾಧಿ ಮಾಡಿದರು. ಯಾಕೆಂದರೆ ಅವನು ಜೀವಂತನಾಗಿದ್ದಾಗ ಇಸ್ರೇಲಿನ ದೇವರಿಗೂ ಆತನ ಆಲಯಕ್ಕೂ ಒಳ್ಳೆಯದನ್ನೇ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 24:16
13 ತಿಳಿವುಗಳ ಹೋಲಿಕೆ  

ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ ನೀತಿವಂತನೂ ನಂಬಿಗಸ್ತನೂ ಆಗಿ ನಡೆದನು.


ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಸಹೋದರರೇ, ಮೂಲ ಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತಾಡಬಹುದು ಏನಂದರೆ - ಅವನು ತೀರಿಹೋಗಿ ಹೂಣಲ್ಪಟ್ಟನು; ಅವನ ಸಮಾಧಿ ಈ ದಿನದವರೆಗೂ ನಮ್ಮಲ್ಲಿ ಅದೆ.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಕ್ಕಳು.


ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು. ಅವನು ತೀರಿಹೋದಾಗ ಅವನನ್ನು ಯಾರೂ ಹಂಬಲಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ.


ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು; ಅವನು ಸಾಯುವಾಗ ನೂರಮೂವತ್ತು ವರುಷದವನಾಗಿದ್ದನು.


ಯೆಹೋಯಾದನು ಮೃತನಾದ ಮೇಲೆ ಯೆಹೂದಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು;


ಆದದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು ಅವರಿಗೆ - ನೀವು ಈ ವರೆಗೂ ದೇವಾಲಯವನ್ನೇಕೆ ಜೀರ್ಣೋದ್ಧಾರ ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದು ಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ ಕೂಡಲೆ ಅದನ್ನು ದೇವಾಲಯದ ಜೀರ್ಣೋದ್ಧಾರಕ್ಕಾಗಿ ಕೊಡಿರಿ ಎಂದು ಹೇಳಿದನು.


ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿದಾಗ ಅವರು ಬಂದು ಅವನ ಶವವನ್ನು ಹೊತ್ತುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು