Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:19 - ಕನ್ನಡ ಸತ್ಯವೇದವು J.V. (BSI)

19 ಧೂಪಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದಿದ್ದ ಉಜ್ಜೀಯನು ಕೋಪವುಳ್ಳವನಾದನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು ಯಾಜಕರೊಡನೆ ಸಿಟ್ಟಿನಿಂದ ಮಾತಾಡುತ್ತಿರುವಾಗ ಯಾಜಕರ ಸಮಕ್ಷದಲ್ಲೇ ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಧೂಪ ಹಾಕಬೇಕೆಂದು ಕೈಯಲ್ಲಿ ಧೂಪಾರತಿಯನ್ನು ಹಿಡಿದುಕೊಂಡಿದ್ದ ಉಜ್ಜೀಯನು ಕೋಪಗೊಂಡನು. ಅವನು ಯೆಹೋವನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕರೊಡನೆ ಸಿಟ್ಟಿನಿಂದ ಮಾತನಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯ ಮೇಲೆ ಕುಷ್ಠವು ಕಾಣಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಧೂಪಾರತಿ ಎತ್ತಬೇಕೆಂದು ಕೈಯಲ್ಲಿ ಧೂಪಕಳಸ ವನ್ನು ಹಿಡಿದಿದ್ದ ಉಜ್ಜೀಯನು ಕೋಪಗೊಂಡನು . ಸರ್ವೇಶ್ವರನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕ ರೊಡನೆ ಅವನು ಸಿಟ್ಟಿನಿಂದ ಮಾತಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದನ್ನು ಕೇಳಿ ಉಜ್ಜೀಯನು ಕೋಪಗೊಂಡನು. ಅವನು ಧೂಪ ಹಾಕಲು ಧೂಪಾರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಅವನು ಯಾಜಕರ ಮೇಲೆ ಕೋಪಿಸಿಕೊಂಡಾಗ ಕುಷ್ಠರೋಗವು ಅವನ ಹಣೆಯಲ್ಲಿ ಕಾಣಿಸಿಕೊಂಡಿತು. ಇದು ಯಾಜಕರ ಮುಂದೆ ದೇವಾಲಯದೊಳಗೆ ಧೂಪವೇದಿಕೆಯ ಬಳಿಯಲ್ಲೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಉಜ್ಜೀಯನು ಕೋಪಿಸಿಕೊಂಡನು. ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಆದರೆ ಅವನು ಯಾಜಕರ ಮೇಲೆ ಕೋಪ ಮಾಡುತ್ತಿರುವಾಗಲೇ, ಯೆಹೋವ ದೇವರ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:19
7 ತಿಳಿವುಗಳ ಹೋಲಿಕೆ  

ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಆಸನು ಈ ಮಾತುಗಳ ದೆಸೆಯಿಂದ ಬೇಸರಗೊಂಡು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ ಜನರಲ್ಲಿ ಕೆಲವರನ್ನು ಪೀಡಿಸಿದನು.


ಯಾಜಕನು ಅವನನ್ನು ನೋಡುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಅಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಬಾವಿನಲ್ಲಿ ಮಾಂಸ ಕಾಣಿಸಿದರೆ ಅದು ಹಳೇ ಕುಷ್ಠರೋಗದ ಗುರುತು.


ಅರಸನು ಹಿಂದಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು ಅದರ ಸಮೀಪಕ್ಕೆ ಹೋಗಿ


ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದಕಾರಣ ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿದದರಿಂದ ಅವನೂ ಶೀಘ್ರವಾಗಿ ಹೊರಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು