Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:7 - ಕನ್ನಡ ಸತ್ಯವೇದವು J.V. (BSI)

7 ಫಿಲಿಷ್ಟಿಯರೊಡನೆಯೂ ಗೂರ್ ಬಾಳಿನಲ್ಲಿರುವ ಅರಬಿಯರೊಡನೆಯೂ ಮೆಗೂನ್ಯರೊಡನೆಯೂ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯವು ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಫಿಲಿಷ್ಟಿಯರೊಡನೆ ಗೂರ್ ಬಾಳಿನಲ್ಲಿರುವ ಅರಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧ ಮಾಡಿದಾಗ ಯೆಹೋವನು ಅವನಿಗೆ ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಫಿಲಿಷ್ಟಿಯರ ಮೇಲೆಯೂ, ಗುರ್ಬಾಳಿನಲ್ಲಿ ವಾಸವಾಗಿದ್ದ ಅರಬಿಯರ ಮೇಲೆಯೂ, ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿದಾಗ, ದೇವರು ಅವನಿಗೆ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:7
14 ತಿಳಿವುಗಳ ಹೋಲಿಕೆ  

ಯೆಹೋವನು ಫಿಲಿಷ್ಟಿಯರನ್ನೂ ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಎಬ್ಬಿಸಿದ್ದರಿಂದ


ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವವೆಂದು ತಿಳಿಸಿದ ಸಂಗತಿಗಳನ್ನೇ ಹೊರತು ಇನ್ನೇನೂ ಹೇಳುವವನಲ್ಲ.


ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.


ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಪ್ರಾಕಾರವನ್ನು ಹಾರುವೆನು.


ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರೋಧವಾಗಿ ಯುದ್ಧಕ್ಕೆ ಬಂದರು.


ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಗಳಲ್ಲಿ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ಕೊಡುತ್ತಿದ್ದರು.


ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.


ಮೇಲೆ ಹೇಳಿದ ಪ್ರಭುಗಳು ಯೆಹೂದ ರಾಜನಾದ ಹಿಜ್ಕೀಯನ ಕಾಲದಲ್ಲಿ ಅಲ್ಲಿಗೆ ಹೋಗಿ [ಆ ಹಾಮ್ಯರ] ಪಾಳೆಯಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಜಯಿಸಿ ಎಲ್ಲರನ್ನೂ ನಿರ್ನಾಮಮಾಡಿದರು; ಮತ್ತು ತಮ್ಮ ಆಡುಕುರಿಗಳಿಗೆ ಅಲ್ಲಿ ಮೇವು ಸಿಕ್ಕಿದದರಿಂದ ಅಲ್ಲೇ ವಾಸಿಸಿದರು. ಅಲ್ಲಿನ ಮೂಲನಿವಾಸಿಗಳು ಈಗ ಯಾರೂ ಉಳಿದಿರುವದಿಲ್ಲ.


ಅವರ ಹಿಂಡುಗಳನ್ನು ಅಂದರೆ ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷ ಐವತ್ತು ಸಾವಿರ ಕುರಿಗಳು, ಎರಡು ಸಾವಿರ ಕತ್ತೆಗಳು ಇವುಗಳನ್ನೂ ಲಕ್ಷ ಜನವನ್ನೂ ಕೊಳ್ಳೆಹಿಡಿದು ತಾವು ಸೆರೆಯಾಗಿ ಹೋಗುವವರೆಗೂ ಅವರ ಊರುಗಳಲ್ಲಿ ವಾಸಿಸಿದರು.


ಆಸನು ಅವನೆದುರಿಗೆ ಹೋದನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬೈಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ನೀನೇ ಹೋಗಿ ಕಾರ್ಯವನ್ನು ನಡಿಸು; ಧೈರ್ಯದಿಂದ ಯುದ್ಧಮಾಡು. [ಹಾಗೆ ಮಾಡದಿದ್ದರೆ] ದೇವರು ಶತ್ರುಗಳಿಂದ ನಿನ್ನನ್ನು ಅಪಜಯಪಡಿಸುವನು. ಜಯಾಪಜಯಗಳನ್ನುಂಟುಮಾಡುವದಕ್ಕೆ ಆತನು ಶಕ್ತನಾಗಿರುತ್ತಾನಲ್ಲಾ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು