Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:11 - ಕನ್ನಡ ಸತ್ಯವೇದವು J.V. (BSI)

11 ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುತ್ತಾ ಇದೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಇಲ್ಲವಾದರೆ ಯೆಹೋವನ ಕೋಪಾಗ್ನಿಯೂ ನಿಮ್ಮ ಮೇಲೆ ಉರಿಯುತ್ತದೆಯಷ್ಟೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಉರಿಯುತ್ತಾ ಇದೆ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈಗ ನೀವು ನನ್ನ ಮಾತನ್ನು ಕೇಳಿರಿ, ನೀವು ಸೆರೆಹಿಡಿದ ನಿಮ್ಮ ಸಹೋದರ ಸಹೋದರಿಯರನ್ನು ಹಿಂದಕ್ಕೆ ಕಳುಹಿಸಿರಿ. ಯಾಕೆಂದರೆ ಯೆಹೋವನು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:11
10 ತಿಳಿವುಗಳ ಹೋಲಿಕೆ  

ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.


ನೋಡಿರಿ, ಕೇಡಿನ ಬಂಧಗಳನ್ನು ಬಿಚ್ಚುವದು, ನೊಗದ ಕಣ್ಣಿಗಳನ್ನು ಕಳಚುವದು, ಜಜ್ಜಿಹೋದವರನ್ನು ಬಿಡುಗಡೆಮಾಡುವದು, ನೊಗಗಳನ್ನೆಲ್ಲಾ ಮುರಿಯುವದು,


ಆದದರಿಂದ ನಮ್ಮ ಪ್ರಭುಗಳು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆ ಮಾಡಿಕೊಂಡವರೆಲ್ಲರೂ ನೇವಿುತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ ಎಂದು ಉತ್ತರಕೊಟ್ಟರು.


ಇದಲ್ಲದೆ ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು ಸಮಾರ್ಯಕ್ಕೆ ಒಯ್ದರು.


ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬವರು ಯುದ್ಧದಿಂದ ಬರುವವರ ಮುಂದೆ ನಿಂತು ಅವರಿಗೆ -


ನಿನ್ನ ಕೋಪಜ್ವಾಲೆಯು ನನ್ನನ್ನು ಕವಿದದೆ. ನಿನ್ನಿಂದುಂಟಾದ ದಿಗಿಲಿನಿಂದ ಹಾಳಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು