Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:9 - ಕನ್ನಡ ಸತ್ಯವೇದವು J.V. (BSI)

9 ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ - ನಿಮ್ಮ ಪಿತೃಗಳ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅ ವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಮಾರಿಯದಲ್ಲಿ ಸರ್ವೇಶ್ವರನ ಒಬ್ಬ ಪ್ರವಾದಿ ಇದ್ದನು. ಅವನ ಹೆಸರು ಓದೇದ್. ಅವನು ಸಮಾರಿಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು, “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರ ಆಕಾಶವನ್ನು ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:9
22 ತಿಳಿವುಗಳ ಹೋಲಿಕೆ  

ಅವಳ ಪಾಪಗಳು ಒಂದರ ಮೇಲೊಂದು ಸೇರಿ ಆಕಾಶದ ಪರ್ಯಂತರಕ್ಕೂ ಬೆಳೆದವೆ. ದೇವರು ಅವಳ ಅನ್ಯಾಯಗಳನ್ನು ಜ್ಞಾಪಿಸಿಕೊಂಡನು.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ; ನಿನ್ನ ಕಡೆಗೆ ಮುಖವನ್ನೆತ್ತುವದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದವು. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಯಿತು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.


ನೀನು ಹೊಡೆದವನನ್ನು ಅವರು ಹಿಂಸಿಸುತ್ತಾರೆ; ನೀನು ಗಾಯಮಾಡಿದವರ ನೋವು ಅವರ ಆಡಿಕೆಗೆ ಕಾರಣವಾಗಿದೆ.


ಆದದರಿಂದ ಅವನ ದೇವರಾದ ಯೆಹೋವನು ಅವನನ್ನು ಅರಾಮ್ಯರ ಅರಸನ ಕೈಗೆ ಒಪ್ಪಿಸಿದನು; ಅರಾಮ್ಯರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಅವನು ಇಸ್ರಾಯೇಲ್ ರಾಜನ ಕೈಗೂ ಒಪ್ಪಿಸಲ್ಪಟ್ಟು ಅವನಿಂದಲೂ ಪೂರ್ಣವಾಗಿ ಅಪಜಯಹೊಂದಿದನು.


ಪ್ರವಾದಿಯು ಅರಸನಿಗೆ - ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಆಗ ಪ್ರವಾದಿಯು ತಿರಿಗಿ ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಅರಾಮ್ಯರ ಅರಸನು ಮುಂದಿನ ವರುಷದಲ್ಲಿ ಇನ್ನೊಮ್ಮೆ ನಿನಗೆ ವಿರೋಧವಾಗಿ ಬರುತ್ತಾನೆ; ಆದದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬದನ್ನು ಪರ್ಯಾಲೋಚಿಸು ಅಂದನು.


ಆಗ ಒಬ್ಬ ಪ್ರವಾದಿಯು ಇಸ್ರಾಯೇಲ್ಯರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ - ಈ ಮಹಾ ಸಮೂಹವನ್ನು ನೋಡಿದಿಯಾ; ನಾನು ಯೆಹೋವನೇ ಎಂಬದು ನಿನಗೆ ಗೊತ್ತಾಗುವಂತೆ ಈಹೊತ್ತೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಆದದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟನು. ಅವರು ಎಂಟು ವರುಷಗಳವರೆಗೆ ಅವನಿಗೆ ದಾಸರಾಗಿದ್ದರು.


ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ಅದಕ್ಕೆ ಯೆಹೋವನು - ನೀನು ಏನು ಮಾಡಿದಿ? ನಿನ್ನ ತಮ್ಮನ ರಕ್ತವು ಭೂವಿುಯ ಕಡೆಯಿಂದ ನನ್ನನ್ನು ಕೂಗುತ್ತದೆ, ಕೇಳು.


ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಹಸ್ತದಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.


ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಗಟ್ಟಿಯಾಗಿ ಕೂಗುತ್ತಾ ಅದನ್ನು ಖಂಡಿಸು; ಅದರ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂದು ಅಪ್ಪಣೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು