Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:10 - ಕನ್ನಡ ಸತ್ಯವೇದವು J.V. (BSI)

10 ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿಹೋಗುವಂತೆ ಇಸ್ರಾಯೇಲ್‍ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವದಕ್ಕೆ ಮನಸ್ಸುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈಗ ನಮ್ಮ ಮೇಲಿರುವ ದೈವಕೋಪಾಗ್ನಿ ತೊಲಗಿಹೋಗುವಂತೆ ಇಸ್ರಯೇಲ್ ದೇವರಾದ ಸರ್ವೇಶ್ವರನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ತೀರ್ಮಾನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಹಿಜ್ಕೀಯನಾದ ನಾನು ಇಸ್ರೇಲರ ದೇವರಾದ ಯೆಹೋವನೊಂದಿಗೆ ಒಡಂಬಡಿಕೆ ಮಾಡುತ್ತೇನೆ. ಆತನು ಇನ್ನು ಮುಂದೆ ನಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:10
19 ತಿಳಿವುಗಳ ಹೋಲಿಕೆ  

ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ - ಬನ್ನಿರಿ, ಯೆಹೋವನನ್ನು ಆಶ್ರಯಿಸಿ ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ ಎಂದು ಹೇಳುವರು.


ಅನಂತರ ಯೆಹೋಯಾದನು ಎಲ್ಲಾ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.


ಸ್ವಾವಿುಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರೂ ಹೇಳಿಕೊಟ್ಟ ಬುದ್ಧಿವಾದಾನುಸಾರ ಇಂಥ ಎಲ್ಲಾ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವದಾಗಿ ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯೋಣ.


ನಾವು ನೆನಸಿದ್ದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿದರು.


ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗಿ ನನ್ನ ಮುಂದೆ ಮಾಡಿದ ಒಪ್ಪಂದದ ನಿಬಂಧನೆಗಳನ್ನು ಕೈಕೊಳ್ಳದೆ


ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ; ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆಮಾಡಿಕೊಂಡಿರಿ;


ಈ ಎಲ್ಲಾ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಪ್ರಭುಗಳೂ ಲೇವಿಯರೂ ಯಾಜಕರೂ ಸಹಿಮಾಡಿ ಮುದ್ರೆಹಾಕಿದರು.


ಆದರೂ ಮನಸ್ಸೆಯ ದುಷ್ಕೃತ್ಯಗಳ ದೆಸೆಯಿಂದ ಯೆಹೂದ್ಯರ ಮೇಲಿದ್ದ ಯೆಹೋವನ ಉಗ್ರಕೋಪವು ಇಳಿಯಲಿಲ್ಲ.


ಕಂಬದ ಬಳಿಯಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣಮಾಡಿದರು.


ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.


ಆದದರಿಂದ ನಮ್ಮ ಪ್ರಭುಗಳು ಸರ್ವಸಮೂಹಕ್ಕೋಸ್ಕರ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆ ಮಾಡಿಕೊಂಡವರೆಲ್ಲರೂ ನೇವಿುತವಾದ ದಿನದಲ್ಲಿ ತಮ್ಮ ಊರಿನ ಹಿರಿಯರೊಡನೆಯೂ ನ್ಯಾಯಾಧಿಪತಿಗಳೊಡನೆಯೂ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಮೇಲೆ ಮಾಡಿಕೊಂಡಿರುವ ಉಗ್ರಕೋಪವು ಹೀಗೆ ಪರಿಹಾರವಾಗಲಿ ಎಂದು ಉತ್ತರಕೊಟ್ಟರು.


ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಅದು ಇಂದಿನವರೆಗೂ ಅದೆ. ಆಗ ಯೆಹೋವನ ರೋಷಾಗ್ನಿಯು ಅಡಗಿಹೋಯಿತು. ಈ ಸಂಗತಿಯ ದೆಸೆಯಿಂದ ಆ ಸ್ಥಳಕ್ಕೆ ಇಂದಿನವರೆಗೂ ಆಕೋರಿನ ತಗ್ಗು ಎಂಬ ಹೆಸರಿರುತ್ತದೆ.


ಎಜ್ರನು ಪರಾತ್ಪರ ದೇವರಾದ ಯೆಹೋವನನ್ನು ಸ್ತುತಿಸಿದ್ದಕ್ಕೆ ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್ ಎಂದು ಹೇಳಿ ನೆಲದ ಮಟ್ಟಿಗೂ ತಲೆಬಾಗಿ ಯೆಹೋವನನ್ನು ಆರಾಧಿಸಿದರು.


ಆತನು ನಿತ್ಯವಾಗಿ ಕೋಪಮಾಡುವನೋ? ಕೊನೆಯ ತನಕ ಇಟ್ಟುಕೊಳ್ಳುವನೋ? ಅಂದುಕೊಳ್ಳುತ್ತಿದ್ದೀ. ಇಗೋ, ನೀನು ಹೀಗೆ ಮಾತಾಡಿದರೇನು? ದುಷ್ಕೃತ್ಯಗಳನ್ನು ನಡಿಸಿ ಕೃತಾರ್ಥಳಾಗಿದ್ದೀ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು; ನಾನು ಕೋಪ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು