Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:10 - ಕನ್ನಡ ಸತ್ಯವೇದವು J.V. (BSI)

10 ದೂತರು ಎಫ್ರಾಯೀಮ್ ಮನಸ್ಸೆ ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋಗುತ್ತಿರಲು ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೂತರು ಎಫ್ರಾಯೀಮ್, ಮನಸ್ಸೆ, ಜೆಬುಲೂನ್ ಪ್ರಾಂತ್ಯಗಳಲ್ಲಿ, ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೂತರು ಎಫ್ರಯಿಮ್, ಮನಸ್ಸೆ, ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಆದರೆ ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸಂದೇಶಕಾರರು ಎಫ್ರಾಯೀಮ್ ಮತ್ತು ಮನಸ್ಸೆ ಪ್ರಾಂತ್ಯಗಳ ಪ್ರತಿಯೊಂದು ಪಟ್ಟಣಗಳಿಗೆ ಹೋದರು. ಜೆಬುಲೂನ್ ಪ್ರಾಂತ್ಯಕ್ಕೂ ಹೋದರು. ಆದರೆ ಜನರು ಸಂದೇಶಕರನ್ನು ಗೇಲಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:10
18 ತಿಳಿವುಗಳ ಹೋಲಿಕೆ  

ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ಅರಸನ ಮತ್ತು ಅವನ ಸರದಾರರ ಪತ್ರಗಳನ್ನು ತೆಗೆದುಕೊಂಡುಹೋದ ದೂತರು ಇಸ್ರಾಯೇಲ್ ಯೆಹೂದದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಪ್ರಕಟಿಸಿದ್ದೇನಂದರೆ - ಇಸ್ರಾಯೇಲ್ಯರೇ, ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನೂ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ತಿರುಗಿಕೊಳ್ಳುವನು.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯಮಾಡಿದರು; ಬೇರೆ ಕೆಲವರು - ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.


ಜನರು ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಹಾಸ್ಯಮಾಡಿ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ಅವನು ದೇವರಾರಿಸಿಕೊಂಡ ಕ್ರಿಸ್ತನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.


ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ ತಾವು ಹಣದಾಶೆಯುಳ್ಳವರಾಗಿದ್ದದರಿಂದ ಹಾಸ್ಯಮಾಡಿದರು.


ಜನರು ಆಕೆ ಸತ್ತಳೆಂದು ತಿಳಿದುಕೊಂಡದರಿಂದ ಆತನನ್ನು ಹಾಸ್ಯಮಾಡಿದರು.


ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ! ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ, ನೀತಿವಂತನೂ ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದಾನೆ.


ನನ್ನ ದಿನಗಳು ಅಂಚೆಯವನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.


ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅರಮನೆಯ ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿಶೀಘ್ರವಾಗಿ ಹೊರಟರು.


ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಅವುಗಳಿಗೆ ರಾಜಮುದ್ರೆಯನ್ನು ಹಾಕಿ ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮುಖಾಂತರ ಕಳುಹಿಸಿದನು.


ಈ ನಿರ್ಣಯವು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಸುರಾಪಾನ ಮಾಡುವದಕ್ಕೆ ಕೂತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ - ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನ ಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಮುದುಕರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ, ಅವರ ಸೊತ್ತನ್ನು ಸೂರೆಮಾಡಿರಿ ಎಂದೂ


ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ - ನೀವು ಇಲ್ಲಿ ಮಾಡುವದೇನು? ಅರಸನಿಗೆ ವಿರೋಧವಾಗಿ ತಿರುಗಿಬೀಳಬೇಕೆಂದಿರುತ್ತೀರೋ ಎಂದು ಕೇಳಿದರು.


ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣು ಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ - ನೀವೆದ್ದು ಈ ಸ್ಥಳವನ್ನು ಬಿಟ್ಟು ಹೋಗಿರಿ, ಯೆಹೋವನು ಈ ಊರನ್ನು ನಾಶಮಾಡುತ್ತಾನೆ ಎಂದು ಹೇಳಿದನು. ಆದರೆ ಅವನು ಅವರಿಗೆ ಗೇಲಿಮಾಡುವವನಾಗಿ ಕಾಣಿಸಿದನು.


ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕೋಸ್ಕರ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ ಯೆರೂಸಲೇವಿುನವರಿಂಲೂ ಕೂಡಿಸಿದ್ದ ಹಣವನ್ನು


ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ಕಸ್ದೀಯರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಿಯಾರು ಎಂದು ಶಂಕೆಪಡುತ್ತೇನೆ ಎಂದುತ್ತರಕೊಡಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು