Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:14 - ಕನ್ನಡ ಸತ್ಯವೇದವು J.V. (BSI)

14 ಅವರು ಯೆರೂಸಲೇವಿುನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್‍ಹಳ್ಳದಲ್ಲಿ ಬೀಸಾಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಯೆರೂಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಜನರು ಜೆರುಸಲೇಮಿನೊಳಗಿದ್ದ ಅನ್ಯ ದೇವರುಗಳಿಗಾಗಿ ಮಾಡಿದ್ದ ಯಜ್ಞವೇದಿಕೆಗಳನ್ನು ಕೆಡವಿಹಾಕಿದರು; ವಿಗ್ರಹಗಳಿಗೆ ಧೂಪಸಮರ್ಪಣೆಗಾಗಿ ಮಾಡಿದ ವೇದಿಕೆಗಳನ್ನೂ ಹಾಳುಗೆಡವಿದರು. ಅವುಗಳನ್ನೆಲ್ಲಾ ಕಿದ್ರೋನ್ ಕಣಿವೆಯಲ್ಲಿ ಬಿಸಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:14
13 ತಿಳಿವುಗಳ ಹೋಲಿಕೆ  

ಇದಲ್ಲದೆ ಆಹಾಜನು ದೇವಾಲಯದ ಸಾಮಾನುಗಳನ್ನು ಕೂಡಿಸಿ ಅವುಗಳನ್ನು ಕತ್ತರಿಸಿಬಿಟ್ಟನು; ಯೆಹೋವನ ಆಲಯದ ಬಾಗಲುಗಳನ್ನು ಮುಚ್ಚಿ ಯೆರೂಸಲೇವಿುನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.


ಯಾಜಕರು ಯೆಹೋವನ ಆಲಯವನ್ನು ಶುದ್ಧಮಾಡುವದಕ್ಕೋಸ್ಕರ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.


ಅರಸನಾದ ಆಸನ ತಾಯಿ ಮಾಕಳು ಅಶೇರದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದದರಿಂದ ಅವನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.


ಇವರೆಲ್ಲರೂ ಮುಂದೆ ನಡೆಯುವಾಗ ಸುತ್ತಣವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲಾ ಜನರೂ ಕಿದ್ರೋನ್‍ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.


ಯೇಸು ಇದನ್ನು ಹೇಳಿದ ಮೇಲೆ ತನ್ನ ಶಿಷ್ಯರ ಸಂಗಡ ಕೆದ್ರೋನ್ ಹಳ್ಳದ ಆಚೆಗೆ ಹೊರಟುಹೋದನು. ಅಲ್ಲಿ ಒಂದು ತೋಟವಿತ್ತು; ಅದರೊಳಕ್ಕೆ ಆತನೂ ಆತನ ಶಿಷ್ಯರೂ ಹೋದರು.


ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡಿಸಿ ಪುಡಿಪುಡಿಮಾಡಿಸಿ ಇಸ್ರಾಯೇಲ್‍ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಯೆರೂಸಲೇವಿುಗೆ ಹಿಂದಿರುಗಿದನು.


ಇದಲ್ಲದೆ ಅವನು ಬಾಳ್‍ದೇವತೆಗಳ ಯಜ್ಞವೇದಿಗಳನ್ನು ತನ್ನೆದುರಿನಲ್ಲಿಯೇ ಹಾಳು ಮಾಡಿಸಿ ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಅಶೇರಸ್ತಂಭ ಕೆತ್ತಿದ ಮತ್ತು ಎರಕದ ವಿಗ್ರಹ ಇವುಗಳನ್ನು ಒಡಿಸಿ ಪುಡಿಪುಡಿಮಾಡಿಸಿ ಅವುಗಳಿಗೆ ಯಜ್ಞವನ್ನರ್ಪಿಸಿದವರ ಸಮಾಧಿಗಳ ಮೇಲೆ ಆ ದೂಳನ್ನು ಚೆಲ್ಲಿಸಿದನು.


ಒಂದು ವೇಳೆ ನೀವು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಯೆರೂಸಲೇವಿುನ ಯಜ್ಞವೇದಿಯ ಮುಂದೆಯೇ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಆ ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆತನ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!


ಅವನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರುಷ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇದ್ದ ಪೂಜಾಸ್ಥಳಗಳನ್ನೂ ಅಶೇರ ಸ್ತಂಭಗಳನ್ನೂ ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಪಡಿಸಿದನು.


ಒಂದು ವೇಳೆ ನೀನು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾ ಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳು ಮಾಡಿದನಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು