Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:22 - ಕನ್ನಡ ಸತ್ಯವೇದವು J.V. (BSI)

22 ಹಿಜ್ಕೀಯನು ಯೆಹೋವನ [ಭಜನೆಯಲ್ಲಿ] ಗಟ್ಟಿಗರಾಗಿದ್ದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತಾಡಿದನು. ನೇಮಕವಾದ ಏಳು ದಿವಸಗಳವರೆಗೂ ಜನರು ಸಮಾಧಾನಯಜ್ಞಗಳನ್ನರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರ ಸೇವೆ ಮಾಡುವದನ್ನು ತಿಳಿದಿದ್ದ ಲೇವಿಯರನ್ನು ಹಿಜ್ಕೀಯನು ಪ್ರೋತ್ಸಾಹಿಸಿದನು. ಜನರು ಏಳು ದಿವಸ ಹಬ್ಬವನ್ನು ಆಚರಿಸಿ ಸಮಾಧಾನಯಜ್ಞವನ್ನು ಸಮರ್ಪಿಸಿದರು; ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:22
23 ತಿಳಿವುಗಳ ಹೋಲಿಕೆ  

ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರ ಗ್ರಂಥವನ್ನು ಪಾರಾಯಣ ಮಾಡಿಸಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.


ಅನಂತರ ಅವನು ಜನರ ಮೇಲೆ ಸೇನಾಪತಿಗಳನ್ನು ನೇವಿುಸಿ ಅವರನ್ನು ಊರುಬಾಗಲಿನ ಬೈಲಿನಲ್ಲಿ ಕೂಡಿಸಿಕೊಂಡು ಅವರಿಗೆ -


ಈಗ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ ಅನ್ನಲು


ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು; ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ಯಾಕಂದರೆ ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ಆಹಾ, ನಾನು ಅವಳನ್ನು ಒಲಿಸಿ ಅಡವಿಗೆ ಕರಕೊಂಡು ಹೋಗಿ ಅವಳೊಂದಿಗೆ ಹೃದಯಂಗಮವಾಗಿ ಮಾತಾಡುವೆನು.


ಕೇಳಿರಿ, ನಾನು ಶ್ರೇಷ್ಠವಾದ ಸಂಗತಿಗಳನ್ನು ಹೇಳುವೆನು, ಯಥಾರ್ಥಕ್ಕಾಗಿಯೇ ತುಟಿಗಳನ್ನು ತೆರೆಯುವೆನು,


ಎಜ್ರನು ಮೊದಲನೆಯ ದಿನದಿಂದ ಕಡೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು [ಜನರಿಗೋಸ್ಕರ] ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಿತು.


ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇವಿುಸು. ಅವರು ಹೊಳೆಯಾಚೆಯ ಇಸ್ರಾಯೇಲ್ಯರಲ್ಲಿ ನಿನ್ನ ದೇವರ ಧರ್ಮವನ್ನರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಅವನು ಯೆಹೋವ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲ್ಯರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಲಿಕ್ಕೂ ದೃಢಮಾಡಿಕೊಂಡಿದ್ದನು.


ಎಲ್ಲಾ ಇಸ್ರಾಯೇಲ್ಯರನ್ನು ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ - ದಾವೀದನ ಮಗನೂ ಇಸ್ರಾಯೇಲ್‍ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.


ಇವರು ಯೆಹೋವಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.


ಇಸ್ರಾಯೇಲ್ಯರಿಗೆ ಬಹುಕಾಲದವರೆಗೆ ನಿಜವಾದ ದೇವರೂ ಬೋಧಿಸುವ ಯಾಜಕರೂ ಧರ್ಮಶಾಸ್ತ್ರವೂ ಇರಲಿಲ್ಲ.


ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲ್ಯರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.


ಆಗ ಯೆಹೋಶುವನು ಆಕಾನನಿಗೆ - ನನ್ನ ಮಗನೇ, ನೀನು ಇಸ್ರಾಯೇಲ್ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವದನ್ನೂ ಮುಚ್ಚಬೇಡ ಅಂದನು.


ನಮ್ಮ ದೇವರ ಕೃಪಾಹಸ್ತಪಾಲನೆಯು ನಮಗೆ ದೊರಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನೂ ಮೆರಾರೀಯರಲ್ಲಿ ಹಷಬ್ಯನನ್ನೂ


ಆದದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ; ನಾನು ನಿಮ್ಮನ್ನೂ ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು