Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:5 - ಕನ್ನಡ ಸತ್ಯವೇದವು J.V. (BSI)

5 ಜನರು ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುಗೆ ಬರಬೇಕು ಎಂಬದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಾಯೇಲ್ಯರೊಳಗೆ ಡಂಗುರಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆವರೆಗೂ ಧರ್ಮಶಾಸ್ತ್ರವಿಧಿಯ ಮೇರೆಗೆ ಪಸ್ಕವನ್ನು ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜನರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಬೇಕೆಂಬುದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಆವರೆಗೂ, ಜನರಲ್ಲಿ ಹೆಚ್ಚುಮಂದಿ ಧರ್ಮಶಾಸ್ತ್ರವಿಧಿಯ ಮೇರೆಗೆ, ಪಾಸ್ಕವನ್ನು ಆಚರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದನ್ನು ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣದವರೆಗಿನ ಜನರಿಗೆಲ್ಲಾ ಪ್ರಕಟಿಸಿದರು. ಇಸ್ರೇಲಿನ ದೇವರಾದ ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಲು ಎಲ್ಲರಿಗೂ ಆಹ್ವಾನಿಸಿದರು. ಮೋಶೆಯು ಹೇಳಿದ್ದ ನಿಯಮಕ್ಕನುಸಾರವಾಗಿ ಪಸ್ಕಹಬ್ಬವನ್ನು ಎಷ್ಟೋ ಜನರು ಅನೇಕ ವರ್ಷಗಳಿಂದ ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:5
16 ತಿಳಿವುಗಳ ಹೋಲಿಕೆ  

ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲ್ಯರೆಲ್ಲರೂ ಏಕಮನಸ್ಸಿನಿಂದ ಹೊರಟು ವಿುಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ನೆರೆದರು.


ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡಿಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.


ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ನಿಂತುಹೋಗದೆ ಮೇದ್ಯಯರ ಮತ್ತು ಪಾರಸಿಯರ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಊರ್ಜಿತವಾಗುವಂತೆ ಶಾಸನಕ್ಕೆ ಹಸ್ತಾಕ್ಷರಮಾಡು ಎಂದು ಬಿನ್ನವಿಸಲು


ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -


ಇಂಥಾ ಪಸ್ಕಹಬ್ಬವು ಪ್ರವಾದಿಯಾದ ಸಮುವೇಲನ ದಿವಸಗಳಿಂದ ಇಸ್ರಾಯೇಲ್ಯರಲ್ಲಿ ನಡೆಯಲೇ ಇಲ್ಲ. ಯೋಷೀಯನೂ ಯಾಜಕರೂ ಲೇವಿಯರೂ ಕೂಡಿಬಂದಿದ್ದ ಇಸ್ರಾಯೇಲ್ಯ ಯೆಹೂದ್ಯರೂ ಯೆರೂಸಲೇವಿುನವರೂ ಪಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಾಯೇಲ್ ರಾಜರಲ್ಲಿ ಒಬ್ಬನೂ ಆಚರಿಸಲಿಲ್ಲ.


ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ ಇಸ್ರಾಯೇಲ್ಯರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬದಾಗಿ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಪ್ರಕಟಿಸಿದನು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಸಿದ್ಧಪಡಿಸಬೇಕು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂಬದಾಗಿ ಸಾರಬೇಕು. ನಾನು ನೇವಿುಸಿರುವ ಹಬ್ಬದದಿನಗಳು ಯಾವವಂದರೆ -


ಮಾರಣೇ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ ಒಂದು ತಿತ್ತಿ ತಣ್ಣೀರನ್ನೂ ಕೊಟ್ಟು ಅವಳ ಹೆಗಲಿನ ಮೇಲೆ ಇಟ್ಟು ಮಗುವನ್ನು ಒಪ್ಪಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದರಿಂದ ಅವರು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು