Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:10 - ಕನ್ನಡ ಸತ್ಯವೇದವು J.V. (BSI)

10 ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ - ಜನರು ದೇವರಾದ ಯೆಹೋವನಿಗೋಸ್ಕರ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗೆ ಸಮೃದ್ಧಿಯನ್ನನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಚಾದೋಕ್ ಸಂತಾನದ ಮಹಾಯಾಜಕನಾದ ಅಜರ್ಯನು ಅವನಿಗೆ, “ಜನರು ದೇವರಾದ ಯೆಹೋವನಿಗೋಸ್ಕರ ನೈವೇದ್ಯಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಆತನ ಆಲಯಕ್ಕೆ ತಂದಂದಿನಿಂದ ಯೆಹೋವನು ತನ್ನ ಪ್ರಜೆಗಳಿಗೆ ಸಮೃದ್ಧಿಯಾಗಿ ಅನುಗ್ರಹಿಸಿದ್ದಾನೆ. ನಾವು ಉಂಡು ತೃಪ್ತರಾಗಿ ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚಾದೋಕನ ಕುಲದ ಮಹಾಯಾಜಕನಾದ ಅಜರ್ಯನು ಹಿಜ್ಕೀಯನಿಗೆ, “ದೇವಾಲಯಕ್ಕೆ ಜನರು ಕಾಣಿಕೆಗಳನ್ನು ತರಲು ಪ್ರಾರಂಭ ಮಾಡಿದಂದಿನಿಂದ ನಮಗೆ ಊಟಕ್ಕೆ ಯಾವ ಕೊರತೆಯೂ ಇಲ್ಲವಾಗಿದೆ. ನಾವು ತೃಪ್ತಿಯಾಗುವಷ್ಟು ಊಟಮಾಡಿದರೂ ಇನ್ನೂ ಉಳಿದಿರುತ್ತದೆ. ದೇವರು ನಿಜವಾಗಲೂ ತನ್ನ ಜನರನ್ನು ಆಶೀರ್ವದಿಸಿರುತ್ತಾನೆ. ಆದ್ದರಿಂದಲೇ ನಮಗೆ ಹೇರಳವಾಗಿ ಉಳಿದಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:10
30 ತಿಳಿವುಗಳ ಹೋಲಿಕೆ  

ನನ್ನ ಆಲಯವು ಆಹಾರಶೂನ್ಯವಾಗದಂತೆ ನೀವು ದಶಮಾಂಶ ಯಾವತ್ತನ್ನೂ ಬಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳ ಹಿಡಿಯಲಾಗದಷ್ಟು ಸುವರವನ್ನು ಸುರಿಯುವೆನೋ ಇಲ್ಲವೋ ನನ್ನನ್ನು ಹೀಗೆ ಪರೀಕ್ಷಿಸಿರಿ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು;


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಎಲ್ಲರೂ ಊಟಮಾಡಿ ತೃಪ್ತರಾದರು. ವಿುಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಹೆಡಿಗೆ ತುಂಬಿದವು.


ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಆಲಯಕ್ಕೆ ಅಸ್ತಿವಾರಹಾಕಿದ ಈ ದಿವಸದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. ಕಣಜದಲ್ಲಿ ಕಾಳು ಇನ್ನು ಇದೆಯೋ?


ಆದರೆ ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.


ಯೆಹೋವನ ಆಶೀರ್ವಾದವು ಭಾಗ್ಯದಾಯಕವು; ಅದು ವ್ಯಸನವನ್ನು ಸೇರಿಸದು.


ನಿನ್ನ ಆದಾಯದಿಂದಲೂ ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಇತರ ಯಾಜಕರೂ ಅರಸನಾದ ಉಜ್ಜೀಯನ ಹಿಂದೆಯೇ ಹೋಗಿ ಅವನೆದುರಿಗೆ ನಿಂತು


ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇವಿುಸಿದನು.


ಆರನೆಯ ವರುಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರುಷಗಳ ಬೆಳೆಯಷ್ಟಾಗುವದು.


ಯೆಹೋವನು ಅವನ ಸಂಗಡ ಇದ್ದು ಅವನು ನಡಿಸಿದ್ದೆಲ್ಲವನ್ನು ಕೈಗೂಡಿಸಿದ್ದರಿಂದ ಅವನ ವಶದಲ್ಲಿದ್ದ ಯಾವದೊಂದರ ವಿಷಯದಲ್ಲಿಯೂ ಸೆರೆಮನೆಯ ಯಜಮಾನನು ಏನೂ ಚಿಂತಿಸಲಿಲ್ಲ.


ಅವನು ಯೋಸೇಫನನ್ನು ತನ್ನ ಮನೆಯ ಮೇಲೆಯೂ ಆಸ್ತಿಯ ಮೇಲೆಯೂ ಅಧ್ಯಕ್ಷನಾಗಿ ಇಟ್ಟಂದಿನಿಂದ ಯೆಹೋವನು ಯೋಸೇಫನ ನಿವಿುತ್ತವಾಗಿ ಆ ಐಗುಪ್ತ್ಯನ ಮನೆಯನ್ನು ಅಭಿವೃದ್ಧಿಗೆ ತಂದನು. ಮನೆಯಲ್ಲಾಗಲಿ ಹೊಲದಲ್ಲಾಗಲಿ ಅವನಿಗಿದ್ದ ಎಲ್ಲಾದರ ಮೇಲೆ ಯೆಹೋವನ ಆಶೀರ್ವಾದವುಂಟಾಯಿತು.


ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರುಷದಲ್ಲಿ ನೂರರಷ್ಟು ಬೆಳೆಯನ್ನು ಹೊಂದಿದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾದಾಕನನ್ನು ಪಡೆದನು.


ನಿಮ್ಮ ಕಣಜಗಳು ಯಾವಾಗಲೂ ತುಂಬಿರುವಂತೆಯೂ ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಶುಭವನ್ನು ಅನುಗ್ರಹಿಸುವನು. ಆತನು ನಿಮಗೆ ಕೊಡುವ ದೇಶದಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವನು.


ಅಹೀಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು;


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಹತ್ತಿರ ಆ ರಾಶಿಗಳ ವಿಷಯದಲ್ಲಿ ವಿಚಾರಿಸಲು


ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಿಂದ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರು.


ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ಕೆಲಸವನ್ನೆಲ್ಲಾ ಮಾಡುವದಕ್ಕೆ ಸಾಕಾಗುವದಕ್ಕಿಂತಲೂ ಹೆಚ್ಚಾದ ಸಾಮಗ್ರಿಯಿತ್ತು.


ಅದಕ್ಕೆ ದೇವರು - ನೀನು ಅವರ ಜೊತೆಯಲ್ಲಿ ಹೋಗಬಾರದು; ಆ ಜನಾಂಗದವರು ನನ್ನ ಆಶೀರ್ವಾವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು ಎಂದು ಹೇಳಿದನು.


ನಮ್ಮ ದೇವರಾದ ಯೆಹೋವನೇ, ನಿನ್ನ ಪರಿಶುದ್ಧನಾಮಕ್ಕೋಸ್ಕರ ಆಲಯಕಟ್ಟಿಸಬೇಕೆಂದು ಸಂಗ್ರಹಿಸಿಟ್ಟಿರುವ ಈ ಎಲ್ಲಾ ವಸ್ತುಗಳು ನಿನ್ನಿಂದಲೇ ನಮಗೆ ದೊರಕಿದವು; ಇವೆಲ್ಲಾ ನಿನ್ನವೇ.


ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿತುಳುಕುವದು.


ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ; ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು