Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:20 - ಕನ್ನಡ ಸತ್ಯವೇದವು J.V. (BSI)

20 ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ ನೀತಿವಂತನೂ ನಂಬಿಗಸ್ತನೂ ಆಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ, ನೀತಿವಂತನೂ, ನಂಬಿಗಸ್ತನೂ ಆಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹಿಜ್ಕೀಯನು ಜುದೇಯದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಸರ್ವೇಶ್ವರನಿಗೆ ಒಳ್ಳೆಯವನು, ನೀತಿವಂತನು ಹಾಗು ನಂಬಿಗಸ್ತನು ಆಗಿ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಹೀಗೆ ಅರಸನಾದ ಹಿಜ್ಕೀಯನು ಯೆಹೂದ ದೇಶದಲ್ಲಿ ಈ ಒಳ್ಳೆಯ ಕಾರ್ಯವನ್ನು ಮಾಡಿದನು. ದೇವರಾದ ಯೆಹೋವನ ದೃಷ್ಟಿಯಲ್ಲಿ ಯೋಗ್ಯವಾದದ್ದನ್ನು ನಂಬಿಗಸ್ತಿಕೆಯಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಉತ್ತಮವಾದದ್ದನ್ನೂ, ಸರಿಯಾದದ್ದನ್ನೂ, ಸತ್ಯವಾದದ್ದನ್ನೂ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:20
11 ತಿಳಿವುಗಳ ಹೋಲಿಕೆ  

ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ಅವನು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಿಕನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ಪ್ರಿಯನೇ, ಪರಿಚಯವಿಲ್ಲದವರಾದ ಸಹೋದರರಿಗೂ ನೀನು ಸತ್ಕಾರವನ್ನು ಮಾಡುವದರಲ್ಲಿ ನಂಬುವವನಿಗೆ ಯೋಗ್ಯನಾಗಿ ನಡೆಯುತ್ತೀ.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು, ದೇವರೂ ಸಾಕ್ಷಿ.


ಯೇಸು ತನ್ನ ಕಡೆಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ - ಇಗೋ ಇವನು ನಿಜವಾದ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.


ಯೆರೂಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದನು.


ಇವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಅಬೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದಲ್ಲಿ ದೇಶದಲ್ಲಿ ಹತ್ತು ವರುಷ ಸಮಾಧಾನವಿತ್ತು.


ಇದಲ್ಲದೆ ಸಿಂಹಾಸನವು ಕೃಪಾಧಾರದ ಮೇಲೆ ಸ್ಥಾಪಿತವಾಗಿದೆ; ರಾಜ್ಯಭಾರಪ್ರವೀಣನೂ ಧರ್ಮಾಸಕ್ತನೂ ನ್ಯಾಯನಿಪುಣನೂ ಆದವನು ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ಕುಳಿತಿದ್ದಾನೆ.


ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು