Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:1 - ಕನ್ನಡ ಸತ್ಯವೇದವು J.V. (BSI)

1 ಈ ಭಕ್ತಿಕಾರ್ಯಗಳಾದನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈ ಧಾರ್ಮಿಕ ಸುಧಾರಣೆಗಳಾದ ನಂತರ ಅಸ್ಸೀರಿಯಾದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಜುದೇಯಕ್ಕೆ ನುಗ್ಗಿದನು. ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಮುತ್ತಿಗೆ ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹೀಗೆ ಒಳ್ಳೆಯ ಕಾರ್ಯಗಳನ್ನು ಹಿಜ್ಕೀಯನು ಮಾಡುತ್ತಿರುವಾಗ ಅಶ್ಶೂರದ ರಾಜನಾದ ಸನ್ಹೇರೀಬನು ಯೆಹೂದದ ಮೇಲೆ ಯುದ್ಧಮಾಡಲು ಬಂದನು. ಸರಿಯಾದ ಸಮಯದಲ್ಲಿ ಪಟ್ಟಣದ ಮೇಲೆ ಧಾಳಿಮಾಡಿ ಸೋಲಿಸುವದಕ್ಕೋಸ್ಕರ ಸನ್ಹೇರೀಬನೂ ಅವನ ಸೈನಿಕರೂ ಪಟ್ಟಣಗಳ ಕೋಟೆಗಳ ಹೊರಗಡೆ ಪಾಳೆಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:1
16 ತಿಳಿವುಗಳ ಹೋಲಿಕೆ  

ಒಡೆಯುವವನು ಅವರ ಮುಂದೆ ಹೊರಟಿದ್ದಾನೆ; ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ; ಅವರ ಅರಸನು ಅವರ ಮುಂದೆ ತೆರಳಿದ್ದಾನೆ, ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ.


ಇಸ್ರಾಯೇಲು ಐಗುಪ್ತದೇಶಕ್ಕೆ ಹಿಂದಿರುಗದು; ಅದು [ನನ್ನ ಕಡೆಗೆ] ಹಿಂದಿರುಗಲು ಒಪ್ಪದ ಕಾರಣ ಅಶ್ಶೂರವೇ ಅದಕ್ಕೆ ರಾಜನಾಗಬೇಕು.


ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರುಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತದೊಳಗೆ ಕೋಟೆಕೊತ್ತಲಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.


ಆರನೆಯ ವರುಷದಲ್ಲಿ ಸ್ವಾಧೀನವಾಗಲು ಇಸ್ರಾಯೇಲ್ಯರನ್ನು ಸೆರೆಹಿಡಿದು ಹಲಹು, ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.


ಅದು ಹೋಶೇಯನ ಆಳಿಕೆಯ ಒಂಭತ್ತನೆಯ ವರುಷದಲ್ಲಿ ಅವನ ಸ್ವಾಧೀನವಾಗಲು ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಶ್ಶೂರ್‍ದೇಶಕ್ಕೆ ಒಯ್ದು ಹಲಹು ಪ್ರಾಂತದಲ್ಲಿಯೂ ಹಾಬೋರ್ ಹೊಳೆಯಿರುವ ಗೋಜಾನ್ ಪ್ರಾಂತದಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.


ಅಶ್ಶೂರ್‍ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್‍ದೇಶಕ್ಕೆ ವಿರೋಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.


ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇವಿುನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವದು ಹಿಜ್ಕೀಯನಿಗೆ ಗೊತ್ತಾಗಲು


ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.


ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬವನು ಯುದ್ಧಮಾಡುವದಕ್ಕೋಸ್ಕರ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.


ಇದೇ ದಿವಸ [ಶತ್ರುಗಳು] ನೋಬಿನಲ್ಲಿ ಬೀಡುಗೊಳ್ಳುವರು; ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇವಿುನ ಬೆಟ್ಟದ ಕಡೆಗೆ, ಕೈ ಬೀಸುತ್ತಾರೆ.


ಆಗ ಅಶ್ಶೂರ್ಯರ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು