Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 32:3 - ಕನ್ನಡ ಸತ್ಯವೇದವು J.V. (BSI)

3 ಅವನು ಪಟ್ಟಣದ ಹೊರಗಿರುವ ಎಲ್ಲಾ ಬಾವಿಗಳನ್ನು ಮುಚ್ಚಿಸಬೇಕೆಂದು ಮನಸ್ಸುಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನಿಟ್ಟು ಅವರ ಸಹಾಯವನ್ನು ಪಡಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಪಟ್ಟಣದ ಹೊರಗಿರುವ ಎಲ್ಲಾ ಬಾವಿಗಳನ್ನು ಮುಚ್ಚಿಸಬೇಕೆಂದು ಮನಸ್ಸುಮಾಡಿ ತನ್ನ ಪ್ರಮುಖರ ಮತ್ತು ಶೂರರ ಮುಂದೆ ಆ ಪ್ರಸ್ತಾಪವೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವನು ತನ್ನ ಅಧಿಕಾರಿಗಳನ್ನೂ ಸೇನಾಪತಿಗಳನ್ನೂ ವಿಚಾರಿಸಿದನು. ಪಟ್ಟಣದ ಹೊರಗಿರುವ ಬುಗ್ಗೆಯನ್ನು ನಿಲ್ಲಿಸಿಬಿಡಬೇಕೆಂದು ಅವರೆಲ್ಲರೂ ಆಲೋಚನೆ ಮಾಡಿದರು. ಇದನ್ನು ಮಾಡಿ ಮುಗಿಸಲು ಅಧಿಕಾರಿಗಳೂ ಸೇನಾಪತಿಗಳೂ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 32:3
13 ತಿಳಿವುಗಳ ಹೋಲಿಕೆ  

ಮಂತ್ರಾಲೋಚನೆಯಿಂದ ಯುದ್ಧವನ್ನು ನಡಿಸು; ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವದು.


ಉದ್ದೇಶಗಳು ಮಂತ್ರಾಲೋಚನೆಯಿಂದ ನೆರವೇರುವವು; ಮಂತ್ರಾಲೋಚನೆಯಿಂದಲೇ ಯುದ್ಧವನ್ನು ನಡಿಸು.


ಯೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹುಮಂದಿ ಆಲೋಚನಾಪರರಿರುವಲ್ಲಿ ಈಡೇರುವವು.


ಕರ್ತನ ಮನಸ್ಸನ್ನು ತಿಳುಕೊಂಡವನಾರು?


ಯೆಹೋವನ ಆತ್ಮಕ್ಕೆ ಯಾವನು ವಿಧಿಯನ್ನು ನೇವಿುಸಿದನು? ಯಾವನು ಆಲೋಚನಾಕರ್ತನಾಗಿ ಆತನಿಗೆ ಉಪದೇಶಿಸಿದನು?


ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲವಾದದರಿಂದಲೂ ಜನರು ಯೆರೂಸಲೇವಿುನಲ್ಲಿ ಇನ್ನೂ ಕೂಡಿರಲಿಲ್ಲವಾದದರಿಂದಲೂ ಕೂಡಲೆ ಪಸ್ಕವನ್ನು ಆಚರಿಸಲಾಗದೆಂದು ಅರಸನೂ ಅವನ ಸರದಾರರೂ ಯೆರೂಸಲೇವಿುನ ಸರ್ವಸಂಘದವರೂ ತಿಳಿದು


ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರವೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಅವನು - ನಿನ್ನ ಭರವಸಕ್ಕೆ ಯಾವ ಆಧಾರವುಂಟು? ಬರೀ ಒಂದು ಬಾಯಿಮಾತಿನ ಮೇಲೆ ಯುದ್ಧಕ್ಕೆ ಬೇಕಾದ ವಿವೇಕವೂ ಬಲವೂ ಉಂಟೆಂದು ಅಂದುಕೊಳ್ಳುತ್ತೀ; ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀ?


ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇವಿುನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವದು ಹಿಜ್ಕೀಯನಿಗೆ ಗೊತ್ತಾಗಲು


ಆಗ ಅನೇಕರು ಸೇರಿ - ಇಲ್ಲಿಗೆ ಬರುವ ಅಶ್ಶೂರದ ರಾಜರಿಗೆ ಬೇಕಾದಷ್ಟು ನೀರು ಯಾಕೆ ಸಿಕ್ಕಬೇಕು ಎಂದುಕೊಂಡು ಎಲ್ಲಾ ಬಾವಿಗಳನ್ನೂ ದೇಶಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.


ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಬುರುಜುಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಯನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ,


ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಸಾರ್ಥಕನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು