Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 33:11 - ಕನ್ನಡ ಸತ್ಯವೇದವು J.V. (BSI)

11 ಆದದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬೆಲಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದುದರಿಂದ ಆತನು ಅಶ್ಶೂರದ ಅರಸನ ಸೈನ್ಯಾಧಿಪತಿಗಳನ್ನು ಅವರ ಮೇಲೆ ಬರಮಾಡಿದನು. ಅವರು ಮನಸ್ಸೆಯನ್ನು ಹಿಡಿದು ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಅಶ್ಶೂರ್ ದೇಶದ ಅರಸನ ಸೇನಾಪತಿಗಳು ಬಂದು ಯೆಹೂದದ ಮೇಲೆ ಯುದ್ಧ ಮಾಡುವಂತೆ ಯೆಹೋವನು ಮಾಡಿದನು. ಆ ಸೇನಾಪತಿಗಳು ಮನಸ್ಸೆಯನ್ನು ಬಂಧಿಸಿ ಸೆರೆಯಲ್ಲಿಟ್ಟರು. ಅವನಿಗೆ ಕೊಂಡಿಗಳನ್ನು ಸಿಕ್ಕಿಸಿ ಬೇಡಿಹಾಕಿ ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 33:11
19 ತಿಳಿವುಗಳ ಹೋಲಿಕೆ  

ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ಯೆಹೋವನು ನಿಮ್ಮನ್ನೂ ನೀವು ನೇವಿುಸಿಕೊಳ್ಳುವ ಅರಸರನ್ನೂ ಒಯ್ಯಿಸುವನು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಸೇವಿಸುವಿರಿ.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬೆಲಿಗೆ ಒಯ್ಯುವದಕ್ಕೋಸ್ಕರ


ನಾನು ಆಚೆಹೋಗದಂತೆ ನನ್ನ ಸುತ್ತಲು ಗೋಡೆ ಕಟ್ಟಿ ನನಗೆ ಭಾರಿ ಬೇಡಿಹಾಕಿದ್ದಾನೆ.


ಇದೂ ನಿನಗೆ ಅಸಾಧ್ಯವಾಗುವದಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವದು ಹೇಗೆ? ರಥಾಶ್ವಬಲಗಳಿಗಾಗಿ ಐಗುಪ್ತ್ಯರನ್ನು ನಂಬಿರುತ್ತೀಯೆಂದು ಕಾಣುತ್ತದೆ.


ಅದು ಅಂದುಕೊಳ್ಳುವದೇನಂದರೆ - ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೆ.


ನಮ್ಮ ಕಾಯಗಳ ಮೇಲೆಯೂ ಪಶುಗಳ ಮೇಲೆಯೂ ಅವರು ಅಧಿಕಾರ ನಡಿಸುತ್ತಾರೆ. ನಾವು ಮಹಾಸಂಕಟದಲ್ಲಿರುತ್ತೇವೆ ಅಯ್ಯೋ ಎಂದು ಪ್ರಾರ್ಥಿಸಿದರು.


ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.


ಅನಂತರ ಕಸ್ದೀಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ಫರೋಹ ನೆಕೋವನು ಇವನನ್ನು ಯೆರೂಸಲೇವಿುನಲ್ಲಿ ಬಹು ದಿವಸಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.


ಇಸ್ರಾಯೇಲ್ಯರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಬಾಬೆಲಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇವಿುಸಿಕೊಳ್ಳುವರು ಅನ್ನುತ್ತಾನೆ ಎಂದು ಹೇಳಿದನು.


ಮನಸ್ಸೆಯ ಉಳಿದ ಚರಿತ್ರೆಯೂ ಅವನ ಎಲ್ಲಾ ಕ್ರಿಯೆಗಳೂ ಅವನು ಮಾಡಿದ ಪಾಪಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಯೆಹೋವನು ಫಿಲಿಷ್ಟಿಯರನ್ನೂ ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಎಬ್ಬಿಸಿದ್ದರಿಂದ


ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.


ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೇ ಚಿಂದಿಯನ್ನು ಬಿಗಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು