Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:28 - ಕನ್ನಡ ಸತ್ಯವೇದವು J.V. (BSI)

28 ನಾನು ಈ ದೇಶದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ಈ ದೇಶದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು ಎಂಬುದಾಗಿ ತಿಳಿಸಿದೆ ಎಂದು ಅರಸನಿಗೆ ತಿಳಿಸಿರಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಿನ್ನನ್ನು ನಿನ್ನ ಪೂರ್ವಿಕರ ಬಳಿಗೆ ತೆಗೆದುಕೊಳ್ಳುತ್ತೇನೆ. ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆ. ನೀನು ನಿನ್ನ ಸಮಾಧಿಗೆ ಸಮಾಧಾನದಿಂದ ಸೇರುವೆ. ನಾನು ಈ ಸ್ಥಳದ ಮೇಲೂ ಈ ಸ್ಥಳದಲ್ಲಿ ವಾಸಿಸುವವರ ಮೇಲೂ ತರುವ ಸಂಕಟಗಳಲ್ಲಿ ನೀನು ಒಂದಾನ್ನಾದರೂ ಅನುಭವಿಸುವದಿಲ್ಲ.’” ಹಿಲ್ಕೀಯನೂ ಅರಸನ ಸೇವಕರೂ ಈ ಸಂದೇಶವನ್ನು ಅರಸನಾದ ಯೋಷೀಯನಿಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:28
12 ತಿಳಿವುಗಳ ಹೋಲಿಕೆ  

ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವದು.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇವಿುಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಶ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.


ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿಸೇರುವಂತೆ ಅನುಗ್ರಹಿಸುವೆನು ಎಂಬದೇ ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ನನ್ನ ಜೀವಮಾನದಲ್ಲಿ ಹೇಗೂ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು.


ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು ಎಂದು ಹೇಳಿದನು.


ಈ ದೇಶದ ಮತ್ತು ಅದರ ನಿವಾಸಿಗಳ ವಿಷಯ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರುಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಅನಂತರ ಅರಸನು ದೂತರ ಮುಖಾಂತರ ಯೆರೂಸಲೇವಿುನ ಮತ್ತು ಯೆಹೂದದ ಎಲ್ಲಾ ಹಿರಿಯರನ್ನು ಕೂಡಿಸಿ


ಹಿಜ್ಕೀಯನು ತನ್ನ ಗರ್ವವನ್ನು ಬಿಟ್ಟು ಯೆರೂಸಲೇವಿುನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಜೀವಮಾನದಲ್ಲಿ ಯೆಹೋವನ ಕೋಪವು ಅವರ ಮೇಲೆ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು