Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 34:7 - ಕನ್ನಡ ಸತ್ಯವೇದವು J.V. (BSI)

7 ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡಿಸಿ ಪುಡಿಪುಡಿಮಾಡಿಸಿ ಇಸ್ರಾಯೇಲ್‍ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕಡಿಸಿ ಯೆರೂಸಲೇವಿುಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಜ್ಞವೇದಿಗಳನ್ನು ಕೆಡವಿಸಿ ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಒಡೆದು ಪುಡಿಪುಡಿ ಮಾಡಿಸಿ ಇಸ್ರಾಯೇಲ್ ದೇಶದಲ್ಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಹಾಕಿಸಿ ಯೆರೂಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡೆಸಿದನು, ಇಸ್ರಯೇಲ್ ನಾಡಿನಲ್ಲಿದ್ದ ಸೂರ್ಯಸ್ತಂಭಗಳನ್ನು ಪುಡಿಪುಡಿಮಾಡಿಸಿ ಜೆರುಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಲ್ಲಿಂದ ಮುಂದೆ ಇಸ್ರೇಲ್ ದೇಶದಲ್ಲೂ ಪೂಜಾಸ್ಥಳಗಳನ್ನು ಕೆಡವಿ, ಅಶೇರಸ್ತಂಭಗಳನ್ನು ತುಂಡರಿಸಿ ಎರಕದ ಕೆತ್ತನೆಯ ವಿಗ್ರಹಗಳನ್ನು ಪುಡಿಮಾಡಿ, ಧೂಪವೇದಿಕೆಗಳನ್ನೆಲ್ಲಾ ನಾಶಮಾಡಿ ಜೆರುಸಲೇಮಿಗೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 34:7
12 ತಿಳಿವುಗಳ ಹೋಲಿಕೆ  

ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.


ಮತ್ತು ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು ಒಡೆದು ಅರೆದು ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆನು.


ಯೋಷೀಯನು ಅರಸನಾದಾಗ ಎಂಟು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಮೂವತ್ತೊಂದು ವರುಷ ಆಳಿದನು.


[ಆದದರಿಂದ] ನೀವು ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಬಿಡಬೇಕು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಇಸ್ರಾಯೇಲ್ ರಾಜರು ಸಮಾರ್ಯದ ಪಟ್ಟಣಗಳಲ್ಲಿ ಕಟ್ಟಿಸಿದಂಥ ಯೆಹೋವನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು.


ಯೆಹೂದದ ಎಲ್ಲಾ ಪಟ್ಟಣಗಳೊಳಗಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿದನು. ಇವನ ಆಳಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.


ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೇ ಕಣ್ಣಿಡುವರು.


ಅದರ ಎರಕದ ಬೊಂಬೆಗಳೆಲ್ಲಾ ಒಡೆಯಲ್ಪಡುವವು; ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವದು, ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು; ಅದು ಸೂಳೆತನದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು, ಸೂಳೆತನದ ಸಂಪಾದನೆಯಾಗಿಯೇ ಪರರಪಾಲಾಗುವವು.


ಅಲ್ಲಿನ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.


ಇದಲ್ಲದೆ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.


ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು