2 ಪೂರ್ವಕಾಲ ವೃತ್ತಾಂತ 34:8 - ಕನ್ನಡ ಸತ್ಯವೇದವು J.V. (BSI)8 ಅವನು ತನ್ನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ದೇಶವನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವದಕ್ಕೋಸ್ಕರ ಅಚಲ್ಯನ ಮಗನಾದ ಶಾಫಾನನನ್ನೂ ಪುರಾಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ದೇಶವನ್ನೂ, ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಯೆಹೋವನ ಆಲಯವನ್ನು ಜೀರ್ಣೋದ್ಧಾರ ಮಾಡಿಸುವುದಕ್ಕಾಗಿ ಅಚಲ್ಯನ ಮಗನಾದ ಶಾಫಾನನನ್ನೂ ಪಟ್ಟಣದ ಅಧಿಕಾರಿಯಾದ ಮಾಸೇಯನನ್ನೂ ಪ್ರಧಾನಮಂತ್ರಿಯಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಾಡನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕಾಗಿ ಅಚಲ್ಯನ ಮಗ ಶಾಫಾನನನ್ನು ಪುರಾಧಿಕಾರಿಯಾದ ಮಾಸೇಯನನ್ನು ಮತ್ತು ಮುಖ್ಯಮಂತ್ರಿಯಾಗಿದ್ದ ಯೋವಾಹಾಜನ ಮಗ ಯೋವಾಹನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೋಷೀಯನು ಶಾಫಾನ್, ಮಾಸೇಯ ಮತ್ತು ಯೋವಾಹ ಇವರನ್ನು ತನ್ನ ದೇವರಾದ ಯೆಹೋವನ ಆಲಯವನ್ನು ಸರಿಪಡಿಸಲು ಕಳುಹಿಸಿದನು. ಶಾಫಾನನ ತಂದೆಯ ಹೆಸರು ಅಚಲ್ಯ. ಮಾಸೇಯನು ನಗರದ ನಾಯಕನಾಗಿದ್ದನು. ಯೋವಾಹನ ತಂದೆಯ ಹೆಸರು ಯೆಹೋವಾಹಾಜ್. ಯೋವಾಹನು ರಾಜಲೇಖಕನೂ ಆಗಿದ್ದನು. ಯೆಹೂದವನ್ನು ಮತ್ತು ದೇವಾಲಯವನ್ನು ಶುಚಿಮಾಡುವ ಉದ್ದೇಶದಿಂದ ಯೋಷೀಯನು ದೇವಾಲಯದ ದುರಸ್ತಿಕಾರ್ಯಕ್ಕೆ ಕೈ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅವನು ದೇಶವನ್ನೂ, ಆಲಯವನ್ನೂ ಶುಚಿ ಮಾಡಿದ ತರುವಾಯ ತನ್ನ ದೇವರಾದ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಅಚಲ್ಯನ ಮಗನಾದ ಶಾಫಾನನನ್ನೂ, ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ, ರಾಜಲೇಖಕನಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿ |