Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:13 - ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಚಿದ್ಕೀಯನು ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬೂಕದ್ನೆಚ್ಚರನು ತನಗೆ ವಿಧೇಯನಾಗಿರುವಂತೆ ಚಿದ್ಕೀಯನಿಂದ ಪ್ರಮಾಣ ಮಾಡಿಸಿಕೊಂಡಿದ್ದನು. ಚಿದ್ಕೀಯನು ದೇವರ ಹೆಸರಿನಲ್ಲಿ ಆಣೆಯಿಟ್ಟು ತಾನು ನೆಬೂಕದ್ನೆಚ್ಚರನಿಗೆ ನಂಬಿಗಸ್ತನಾಗಿರುವುದಾಗಿ ಪ್ರಮಾಣಮಾಡಿದ್ದನು. ಆದರೆ ಚಿದ್ಕೀಯನು ಮನಸ್ಸನ್ನು ಕಠಿಣಮಾಡಿಕೊಂಡು ಇಸ್ರೇಲಿನ ದೇವರಾದ ಯೆಹೋವನಿಗೆ ವಿಧೇಯನಾಗಲು ನಿರಾಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:13
27 ತಿಳಿವುಗಳ ಹೋಲಿಕೆ  

ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.


ನಿಮ್ಮಲ್ಲಿ ಒಬ್ಬರಾದರೂ ಪಾಪದಿಂದ ಮೋಸಹೋಗಿ ಕಠಿನರಾಗದಂತೆ ಈಹೊತ್ತು ಎಂಬ ಕಾಲವು ಇರುವ ತನಕ ಪ್ರತಿನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.


ನಿಮ್ಮ ಹಿರಿಯರು ದೇವರ ಕೋಪವನ್ನೆಬ್ಬಿಸಿದ ಸ್ಥಳದಲ್ಲಿ ಅರಣ್ಯದೊಳಗೆ ದೇವರನ್ನು ಪರೀಕ್ಷಿಸಿದ ದಿನದಲ್ಲಿ ಮಾಡಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ನನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಎಚ್ಚರಿಸಿದಿ. ಆದರೂ ಅವರು ಲಾಲಿಸದೆ ಗರ್ವಿಗಳೂ ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು; ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿ ನ್ಯಾಯಗಳನ್ನು ಮೀರಿ ಪಾಪಮಾಡಿ ಹೆಗಲು ಕೊಡದೆ ಮೊಂಡಬಿದ್ದು ನಿನ್ನ ಮಾತನ್ನು ಕೇಳದೆ ಹೋದರು.


ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರೋಧವಾಗಿ ತಿರುಗಿಬಿದ್ದದರಿಂದ ಅವನು ಚಿದ್ಕೀಯನ ಆಳಿಕೆಯ.


ಕೆಲವು ವರುಷಗಳಾದನಂತರ ಇವನು ಪ್ರತಿವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆ ಹೋದದರಿಂದಲೂ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದದರಿಂದಲೂ ಅಶ್ಶೂರದ ಅರಸನು ಇವನನ್ನು ದ್ರೋಹಿಯೆಂದು ತಿಳಿದು ಬಂಧಿಸಿ ಸೆರೆಯಲ್ಲಿಟ್ಟನು.


(ಗಿಬ್ಯೋನ್ಯರು ಇಸ್ರಾಯೇಲ್‍ಕುಲಗಳಿಗೆ ಸೇರಿದವರಲ್ಲ; ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವದಿಲ್ಲವೆಂದು ಪ್ರಮಾಣ ಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದಕುಲಗಳ ಮೇಲೆ ತನಗಿದ್ದ ಅಭಿಮಾನದ ದೆಸೆಯಿಂದ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.)


ಯೆಹೋಶುವನು ಅವರೊಡನೆ - ನಿಮ್ಮನ್ನು ಜೀವದಿಂದುಳಿಸುವೆವೆಂದು ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಂಡನು. ಸಮೂಹಪ್ರಧಾನರೂ ಪ್ರಮಾಣಮಾಡಿದರು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ನಿನ್ನನ್ನು ಅವರ ಮುಂದೆ ಆಟಂಕವಾಗಿ ಒಡ್ಡುತ್ತೀಯಾ?


ಆದರೂ ಫರೋಹನು ಆಗಲೂ ತನ್ನ ಹೃದಯವನ್ನು ಮೊಂಡುಮಾಡಿಕೊಂಡು ಜನರಿಗೆ ಅಪ್ಪಣೆ ಕೊಡದೆಹೋದನು.


ಆದರೆ ಫರೋಹನು ಉಪಶಮನವಾಯಿತೆಂದು ತಿಳಿದಾಗ ತನ್ನ ಹೃದಯವನ್ನು ಮೊಂಡುಮಾಡಿಕೊಂಡನು. ಯೆಹೋವನು ಹೇಳಿದ್ದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.


ಅದಕ್ಕೆ ಜನರು - ಈ ದೇಶದವರ ಪಿತೃಗಳ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿ ಅವರೊಡನೆ ಮಾಡಿದ ನಿಬಂಧನೆಯನ್ನು ಅವರು ಉಲ್ಲಂಘಿಸಿ


ಪ್ರಧಾನಯಾಜಕರೂ ಪ್ರಜೆಗಳೂ ಕೂಡಾ ಮಹಾದ್ರೋಹಿಗಳಾಗಿ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇವಿುನ ದೇವಾಲಯವನ್ನು ಹೊಲೆಮಾಡಿದರು.


ಅದಾಗಿ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರ ಮಾಡಿದ್ದಾರೆ ಎಂಬದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.


ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಸೊಕ್ಕೇರಿದವರೆಲ್ಲರೂ ಅವನಿಗೆ - ನಿನ್ನ ಮಾತು ಸುಳ್ಳು; ಐಗುಪ್ತಕ್ಕೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಯೆಹೋವನು ನಿನ್ನನ್ನು ಕಳುಹಿಸಲಿಲ್ಲ;


ಹೀಗೆ ಅವನ ಹೃದಯವು ಉಬ್ಬಿ ಅವನ ಸ್ವಭಾವವು ಜಡವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ ಮಾನವನ್ನು ತೆಗೆದುಬಿಟ್ಟನು;


ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.


ಯೆಹೋವನು ಮೊದಲು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು; ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಸ್ತ್ರೀಯು ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿದ್ದು ಯೆಹೋವನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವದಾದರೂ ಒಂದನ್ನು ಮುಟ್ಟದೆ ಇರುವೆನೆಂದು ಪ್ರತಿಜ್ಞೆಯನ್ನು ಮಾಡಿಕೊಂಡಾಗ


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿ ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಅವನು ಭ್ರಷ್ಟರನ್ನು ಜರಿದುಬಿಟ್ಟವನೂ ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು