Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 36:16 - ಕನ್ನಡ ಸತ್ಯವೇದವು J.V. (BSI)

16 ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 36:16
44 ತಿಳಿವುಗಳ ಹೋಲಿಕೆ  

ದೂತರು ಎಫ್ರಾಯೀಮ್ ಮನಸ್ಸೆ ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋಗುತ್ತಿರಲು ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ - ನೀನು ಪ್ರವಾದನೆ ಮಾಡುತ್ತಾ - ಯೆಹೋವನು ಇಂತೆನ್ನುತ್ತಾನೆ - ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರವಿುಸುವನು;


ಆದಕಾರಣ ಅವನಿಗೆ ತಟ್ಟನೆ ವಿಪತ್ತು ಸಂಭವಿಸುವದು, ಏಳದ ಹಾಗೆ ಫಕ್ಕನೆ ಮುರಿಯಲ್ಪಡುವನು.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ದೋಸೆಗೋಸ್ಕರ ಗೇಲಿಮಾಡುವ ಮೂರ್ಖರ ಸಂಗಡ ನನ್ನ ಮೇಲೆ ಹಲ್ಲುಕಡಿಯುತ್ತಾರೆ.


ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬೆಲಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬೆಲಿಗೆ ಒಯ್ದನು.


ಬೇರೆ ಕೆಲವರು ಅಪಹಾಸ್ಯ ಕೊರಡೆಯ ಪೆಟ್ಟು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.


ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯಮಾಡಿದರು; ಬೇರೆ ಕೆಲವರು - ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.


ಎಲೈ ತಿರಸ್ಕಾರಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದು ಎಂದು ಹೇಳಿದನು.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ಕೆಲವರು - ಇವರು ಮದ್ಯಪಾನ ಮಾಡಿ ಮತ್ತರಾಗಿದ್ದಾರೆಂದು ಹಾಸ್ಯಮಾಡಿದರು.


ಸಿಪಾಯಿಗಳೂ ಆತನನ್ನು ಹಾಸ್ಯಮಾಡಿದರು; ಅವರು ಆತನ ಹತ್ತಿರ ಬಂದು ಹುಳಿ ಮದ್ಯವನ್ನು ತೋರಿಸಿ -


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರಿಗಿ ಕಳುಹಿಸಿಕೊಟ್ಟನು.


ಹೇಗಂದರೆ - ಅವನನ್ನು ಅನ್ಯರ ಕೈಗೆ ಒಪ್ಪಿಸುವರು, ಇವರು ಅವನನ್ನು ಅಪಹಾಸ್ಯ ಮಾಡುವರು, ಬೈಯುವರು, ಉಗುಳುವರು, ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು;


ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ ತಾವು ಹಣದಾಶೆಯುಳ್ಳವರಾಗಿದ್ದದರಿಂದ ಹಾಸ್ಯಮಾಡಿದರು.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ. ನಾನು ಮರುಳಾದೆನು; ನೀನು ನನಗಿಂತ ಬಲಿಷ್ಟನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ಆದಕಾರಣ ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಡಿರಿ; ಭೂಮಂಡಲದಲ್ಲೆಲ್ಲಾ ನಿಶ್ಚಿತಪ್ರಲಯವಾಗಲಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ನುಡಿಯುವದನ್ನು ಕೇಳಿದ್ದೇನೆ.


ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಆ ದಿನದಲ್ಲಿ ಸಂತೋಷಪಡಿರಿ, ಕುಣಿದಾಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು ಎಂದು ತಿಳುಕೊಳ್ಳಿರಿ. ಈ ಜನರ ಪಿತೃಗಳು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.


ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟು ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದು - ಬೋಳಮಂಡೆಯವನೇ, ಏರು; ಬೋಳಮಂಡೆಯವನೇ, ಏರು ಎಂದು ಕೂಗಿ ಅವನನ್ನು ಪರಿಹಾಸ್ಯಮಾಡಿದರು.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ.


ನನ್ನ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು [ಒಳ್ಳೇ] ದ್ರಾಕ್ಷೆಯನ್ನು ಕೊಡುವದೆಂದು ನಾನು ನಿರೀಕ್ಷಿಸುತ್ತಿರಲು ಏಕೆ ಹೊಲಸುಹಣ್ಣನ್ನು ಬಿಟ್ಟಿತು?


ನೀವೆಲ್ಲರೂ ಕೊಲೆಗೊಳಗಾಗಿ ಬೀಳುವಿರಿ; ಏಕಂದರೆ ನಾನು ಕೂಗಲು ನೀವು ಉತ್ತರಕೊಡಲಿಲ್ಲ. ನಾನು ಹೇಳಲು ನೀವು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡಿರಿ.


ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ನಾನು ಮಾತಾಡುವದೆಲ್ಲಾ ಅರಚಾಟವೇ; ಬಲಾತ್ಕಾರ, ಕೊಳ್ಳೆ ಎಂದೇ ಕೂಗಿಕೊಳ್ಳುತ್ತೇನೆ; [ನಾನು ಸಾರುವ] ಯೆಹೋವನ ವಾಕ್ಯವು ನನ್ನನ್ನು ಜನರ ದೂಷಣೆಗೂ ಪರಿಹಾಸಕ್ಕೂ ಗುರಿಮಾಡಿದೆ.


ಯೆಹೋವನು ಇಂತೆನ್ನುತ್ತಾನೆ - ನಿನ್ನ ಗಾಯವು ಗುಣಹೊಂದದು, ನಿನ್ನ ಬಾಸುಂಡೆಯು ಘೋರವಾಗಿದೆ.


ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲೊಲ್ಲದೆ ನನಗೆ ಕಿವಿಗೊಡಲೇ ಇಲ್ಲ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನನ್ನ ಉಗ್ರರೋಷಾಗ್ನಿಯು ಯೆರೂಸಲೇವಿುನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವದು; ನೀವು ಅಪವಾದ ವಿಸ್ಮಯ ಶಾಪ ದೂಷಣೆಗಳಿಗೆ ಗುರಿಯಾಗುವಿರಿ; ಈ ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.


ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯಜನರು, ಇವರಿಗೆಲ್ಲ ನಿನ್ನ ಹೆಸರಿನ ಮೇಲೆ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.


ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನವನ್ನು ಮೀರಿ ನಡೆದರೆ


ಇಸ್ರಾಯೇಲ್ಯರು ಅವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪಿತೃಗಳ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು; ಅವರಂತೆ ನಡೆಯಲೇ ಇಲ್ಲ.


ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ [ಗಡ್ಡದ ಅರ್ಧಭಾಗವನ್ನು] ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿ ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಯಾರನ್ನು ನೋಡಿ ಬಾಯಿ ಕಿಸಿದು ನಾಲಿಗೆಯನ್ನು ಚಾಚುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು