Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:10 - ಕನ್ನಡ ಸತ್ಯವೇದವು J.V. (BSI)

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಲ್ಲಿ ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ ಸೊಲೊಮೋನರಿಗೂ ಆತನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಉಂಟಾದ ಉಪಕಾರಗಳನ್ನು ನೆನಸಿಕೊಂಡು ಆನಂದಭರಿತರಾಗಿ ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನ ಅರಸನು ಜನರಿಗೆ ಅಪ್ಪಣೆಕೊಟ್ಟನು; ಅವರು ದಾವೀದ - ಸೊಲೊಮೋನರಿಗೂ ಪ್ರಜೆಗಳಾದ ಇಸ್ರಯೇಲರಿಗೂ ಸರ್ವೇಶ್ವರ ಮಾಡಿದ ಉಪಕಾರಗಳನ್ನು ನೆನಸಿಕೊಂಡು, ಆನಂದಭರಿತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:10
22 ತಿಳಿವುಗಳ ಹೋಲಿಕೆ  

ಎಂಟನೆಯ ದಿವಸ ಜನರಿಗೆ ಹೋಗುವದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಮಾಡಿದ ಸರ್ವೋಪಕಾರಗಳನ್ನು ನೆನಸಿ ಆನಂದಚಿತ್ತರಾಗಿ ಹರ್ಷಿಸುತ್ತಾ ತಮ್ಮತಮ್ಮ ನಿವಾಸಗಳಿಗೆ ತೆರಳಿದರು.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ.


ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ನಂಬಿ ಉಲ್ಲಾಸಗೊಂಡನು.


ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;


ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.


ಆತನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.


ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಉತ್ಸಾಹಧ್ವನಿಮಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ.


ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದೀ; ನಿನ್ನ ಕೆಲಸಗಳ ದೆಸೆಯಿಂದ ಉತ್ಸಾಹಧ್ವನಿ ಮಾಡುತ್ತೇನೆ.


ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹಧ್ವನಿ ಮಾಡಿರಿ.


ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.


ದಾವೀದನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಸೊಲೊಮೋನನ ಕಾಲದಿಂದ ಯೆರೂಸಲೇವಿುನಲ್ಲಿ ಅಂಥ ಉತ್ಸವವು ನಡೆದಿರಲಿಲ್ಲವಾದದರಿಂದ ಯೆರೂಸಲೇವಿುನಲ್ಲಿ ಬಹುಸಂತೋಷವುಂಟಾಯಿತು.


ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃಸ್ಥಾಪಿತವಾಯಿತು. ಯಾರೂ ನೆನಸದೆ ಇರುವಲ್ಲಿ ದೇವರು ತಾನೇ ತನ್ನ ಪ್ರಜೆಗಳಿಗೋಸ್ಕರ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲಾ ಜನರೂ ಸಂತೋಷಿಸಿದರು.


ದೇವರಾದ ಯೆಹೋವನೇ, ಎದ್ದು ನಿನ್ನ ಪ್ರತಾಪಯುಕ್ತವಾದ ಮಂಜೂಷದೊಡನೆ ನಿನ್ನ ವಾಸಸ್ಥಾನದೊಳಗೆ ಸೇರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.


ಅದರಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ವಿಧವೆಯರೂ ಸಂಭ್ರಮದಿಂದಿರಬೇಕು.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿ ತಂದೆಯಿಲ್ಲದವರೂ ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.


ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲ್ಯರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರತಂದದ್ದನ್ನೂ ವಿುದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದಾಗ


ತರುವಾಯ ಎಂಟನೆಯ ದಿನದಲ್ಲಿ ಸಭೆ ನೆರೆಯಿತು. ಹೀಗೆ ಏಳು ದಿವಸ ಯಜ್ಞವೇದಿ ಪ್ರತಿಷ್ಠೆಯನ್ನೂ ಇನ್ನು ಏಳು ದಿವಸ ಜಾತ್ರೆಯನ್ನೂ ನಡಿಸಿದರು.


ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಆ ಕಟ್ಟಡಗಳ ವಿಷಯವಾಗಿ ತನ್ನ ಮನಸ್ಸಿನಲ್ಲಿದ್ದದನ್ನೆಲ್ಲಾ ಕೊನೆಗಾಣಿಸಿದ ನಂತರ


ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕಯಜ್ಞಪಶು, ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು