Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:14 - ಕನ್ನಡ ಸತ್ಯವೇದವು J.V. (BSI)

14 ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ತಿರುಗಿಕೊಂಡು ನನ್ನನ್ನು ಪ್ರಾರ್ಥಿಸಿ ನನ್ನ ದರ್ಶನವನ್ನು ಬಯಸುವದಾದರೆ ನಾನು ಪರಲೋಕದಿಂದ ಲಾಲಿಸಿ ಅವರ ಪಾಪಗಳನ್ನು ಕ್ಷವಿುಸಿ ಅವರ ದೇಶದಲ್ಲಿ ಆರೋಗ್ಯವನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಹೆಸರಿನಿಂದ ಕರೆಯಲ್ಪಡುವ ನನ್ನ ಜನರು ದೀನತೆಯಿಂದ ಪ್ರಾರ್ಥಿಸಿ, ತಮ್ಮ ಪಾಪಗಳನ್ನು ಬಿಟ್ಟು ನನ್ನ ಕಡೆಗೆ ತಿರುಗಿದರೆ ನಾನು ಪರಲೋಕದಿಂದ ಅವರನ್ನು ಆಲೈಸಿ, ಅವರ ಪಾಪಗಳನ್ನು ಮನ್ನಿಸಿ ಅವರ ದೇಶವನ್ನು ಗುಣಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:14
31 ತಿಳಿವುಗಳ ಹೋಲಿಕೆ  

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವದು.


ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ ಅದಕ್ಕೆ ಸೌಖ್ಯವನ್ನು ಕೊಟ್ಟು ನಿವಾಸಿಗಳನ್ನು ಗುಣಪಡಿಸುವೆನು; ಸ್ಥೈರ್ಯಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು;


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ಪರಲೋಕದಲ್ಲಿರುವ ನೀನು ಲಾಲಿಸಿ ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲ್ಯರ ಪಾಪಗಳನ್ನು ಕ್ಷವಿುಸಿ ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ ನಿನ್ನ ಪ್ರಜೆಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.


ಗಿಲ್ಯಾದಿನಲ್ಲಿ ಔಷಧವಿಲ್ಲವೋ? ಅಲ್ಲಿ ವೈದ್ಯನು ಸಿಕ್ಕನೋ? ನನ್ನ ಪ್ರಜೆಯೆಂಬಾಕೆಗೆ ಏಕೆ ಗುಣವಾಗಲಿಲ್ಲ?


ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.


ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ ಅವರಿಗೆ ಪಾಪ ಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.


ನಾನು ರಹಸ್ಯದಲ್ಲಿ ನುಡಿದವನಲ್ಲ, ತಮೋಲೋಕದೊಳಗಿಂದ ಮಾತಾಡಿದವನಲ್ಲ, ಶೂನ್ಯವನ್ನೋ ಎಂಬಂತೆ ನನ್ನನ್ನು ಹುಡುಕಿರಿ ಎಂದು ಯಾಕೋಬ ವಂಶದವರಿಗೆ ನಾನು ಅಪ್ಪಣೆಕೊಡಲಿಲ್ಲ. ಯೆಹೋವನೆಂಬ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೇ ಆಡುತ್ತೇನೆ.


ಕರ್ತನು ಅವನಿಗೆ - ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಅವನು ಪ್ರಾರ್ಥನೆ ಮಾಡುತ್ತಾನೆ.


ಬಾಬೆಲನ್ನು ಸ್ವಸ್ಥಮಾಡುವದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.


ನೀನು ದೇಶವನ್ನು ಕಂಪನಗೊಳಿಸಿ ಒಡೆದು ಬಿಟ್ಟಿದ್ದೀ. ಅದರ ಒಡಕುಗಳನ್ನು ಸರಿಮಾಡು; ಅದು ನಡುಗುತ್ತಿರುವದಲ್ಲಾ.


ಹೀಗೆ ಅವರು ಇಸ್ರಾಯೇಲ್ಯರ ಮೇಲೆ ನನ್ನ ಹೆಸರನ್ನು ಉಚ್ಚರಿಸಲಾಗಿ ನಾನು ಅವರನ್ನು ಆಶೀರ್ವದಿಸುವೆನು.


ಭೂವಿುಯಲ್ಲಿರುವ ಎಲ್ಲಾ ಜನಗಳೂ ನಿಮ್ಮನ್ನು ಯೆಹೋವನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಕೇಳಿ ಅವರು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಲೋಕದ ಎಲ್ಲಾ ಜನರೂ ನಿನ್ನ ನಾಮಮಹತ್ತನ್ನು ತಿಳಿದು ನಿನ್ನ ಜನರಾದ ಇಸ್ರಾಯೇಲ್ಯರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ ನಾನು ಈ ಆಲಯವನ್ನು ನಿನ್ನ ಹೆಸರಿನದಾಗಿ ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.


ನರಪುತ್ರನೇ, ಜನರಿಗೆ ಹೀಗೆ ಹೇಳು - ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯವು ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪವು ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯವು ಅವನನ್ನು ಉಳಿಸಲಾರದು.


ಯೆಹೋಷಾಫಾಟನು ಹೆದರಿ ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡು ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.


ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.


ನನ್ನ ಸಾನ್ನಿಧ್ಯಕ್ಕೆ ಬಾ ಎಂಬ ನಿನ್ನ ಮಾತಿಗೆ ನಾನು - ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬರಲೇ ಬರುವೆನು ಎಂದು ಉತ್ತರ ಕೊಟ್ಟೆನು.


ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲ್ಯರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಯೆಹೋವನನ್ನು ಮರೆಹೊಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು