Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:6 - ಕನ್ನಡ ಸತ್ಯವೇದವು J.V. (BSI)

6 ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಯೆಹೋವನ ಗಾಯನಸೇವೆಗೋಸ್ಕರ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿದ್ದವು. ಇವರು ರಾಜ ಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡಿಸುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಮರ್ಪಿಸಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂಬದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಾಯೇಲ್ಯರೆಲ್ಲರೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಪ್ರತಿಯೊಬ್ಬ ಯಾಜಕನು ತನ್ನ ಸೇವೆಗನುಸಾರವಾಗಿ ನಿಂತರು. ಲೇವಿಯರೂ ಮತ್ತು ದಾವೀದ ರಾಜನು ಯೆಹೋವನ ಗಾಯನ ಸೇವೆಗೋಸ್ಕರ ಮಾಡಿಸಿದ ವಾದ್ಯಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು, ದೇವಾರಾಧನೆ ಮಾಡುತ್ತಾ, “ಆತನ ಕೃಪೆಯು ಶಾಶ್ವತವಾದದ್ದು” ಎಂಬುದಾಗಿ ಸ್ತುತಿ ಸಲ್ಲಿಸಿದರು. ಎಲ್ಲಾ ಯಾಜಕರು ಅವರ ಮುಂದೆ ತುತ್ತೂರಿಗಳನ್ನು ಊದಿದರು. ಸಮಸ್ತ ಇಸ್ರಾಯೇಲ್ಯರು ಎದ್ದು ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಜಕರು ತಮ್ಮ ಕೆಲಸಗಳನ್ನು ಮಾಡಲು ತಮ್ಮ ತಮ್ಮ ಸ್ಥಳಗಳಲ್ಲಿ ತಯಾರಾಗಿ ನಿಂತಿದ್ದರು. ಲೇವಿಕುಲದ ಗಾಯಕರು ತಮ್ಮ ವಾದ್ಯಗಳೊಂದಿಗೆ ದೇವರನ್ನು ಸ್ತುತಿಸಲು ನಿಂತಿದ್ದರು. ಆ ವಾದ್ಯಗಳನ್ನು ಅರಸನಾದ ದಾವೀದನು ದೇವರನ್ನು ಸ್ತುತಿಸುವದಕ್ಕೋಸ್ಕರ ತಯಾರಿಸಿದ್ದನು. ಯಾಜಕರೂ ಲೇವಿಯರೂ, “ದೇವರಾದ ಯೆಹೋವನ ಕೃಪೆಯು ನಿರಂತರವಾದದ್ದು” ಎಂದು ಹೇಳುತ್ತಿದ್ದರು. ಯಾಜಕರು ಲೇವಿಯರಿಗೆ ಎದುರಾಗಿ ನಿಂತುಕೊಂಡು ತುತ್ತೂರಿಯನ್ನು ಊದಿದರು. ಇಸ್ರೇಲರೆಲ್ಲರೂ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:6
26 ತಿಳಿವುಗಳ ಹೋಲಿಕೆ  

ನಾರು ಬಟ್ಟೆಗಳನ್ನು ಧರಿಸಿಕೊಂಡು ತಾಳ ಸ್ವರಮಂಡಲ ಕಿನ್ನರಿ ಇವುಗಳನ್ನು ಹಿಡಿದುಕೊಂಡ ಲೇವಿಯ ಗಾಯಕರಾದ ಆಸಾಫ್‍ಹೇಮಾನ್ ಯೆದುತೂನರೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಯಜ್ಞವೇದಿಯ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.


ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.


ವೀಣೆಯ ಮೇಲೆ ಮನಸ್ಸುಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ,


ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದು [ತಮ್ಮ ಸಂಗಡ] ಮಾತಾಡುವವನು ನಾನೇ, ಹೌದು ನಾನೇ, ಎಂದು [ರಕ್ಷಣೆಯ] ಆ ದಿನದಲ್ಲಿ ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು. ಇದೇ ಯೆಹೋವನ ನುಡಿ.


ಯೆಹೋವನು ನನ್ನ ಕಾರ್ಯವನ್ನು ಸಿದ್ಧಿಗೆ ತರುವನು. ಯೆಹೋವನೇ, ನಿನ್ನ ಕೃಪೆಯು ಶಾಶ್ವತವಾದದ್ದು; ನೀನು ಕೈಹಚ್ಚಿದ ಕೆಲಸವನ್ನು ನೆರವೇರಿಸದೆ ಬಿಡಬೇಡ.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.


ಯಾಹುವಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.


ಇವರು ಹಾಡುತ್ತಾ ಕುಣಿಯುತ್ತಾ - ನನ್ನ [ಜೀವಜಲದ] ಒರತೆಗಳೆಲ್ಲಾ ನಿನ್ನಲ್ಲಿಯೇ ಅವೆ ಅನ್ನುವರು.


ಇದಲ್ಲದೆ ಅವನು ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದ ಭಜಿಸುವದಕ್ಕೋಸ್ಕರ ಲೇವಿಯರನ್ನು ದಾವೀದ, ರಾಜದರ್ಶಿಯಾದ ಗಾದ್, ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ಇರಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವದು.


ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ, ಎಲೀಯೆಜೆರ್ ಎಂಬ ಯಾಜಕರು ತುತೂರಿಗಳನ್ನು ಊದುತ್ತಾ ದೇವಮಂಜೂಷದ ಮುಂದೆ ಹೋಗುವವರು. ಓಬೇದೆದೋಮ್, ಯೆಹೀಯ ಎಂಬವರು ಮಂಜೂಷಾಲಯದ ದ್ವಾರಪಾಲಕರು.


ದಾವೀದನೂ ಎಲ್ಲಾ ಇಸ್ರಾಯೇಲ್ಯರೂ ಕಿನ್ನರಿ, ಸ್ವರಮಂಡಲ, ದಮ್ಮಡಿ, ತಾಳ, ತುತೂರಿ ಇವುಗಳ ಧ್ವನಿಯೊಡನೆ ಪೂರ್ಣಾಸಕ್ತಿಯಿಂದ ಗೀತಗಳನ್ನು ಹಾಡುತ್ತಾ ದೇವರ ಮುಂದೆ ನರ್ತನ ಮಾಡುತ್ತಾ ಹೋದರು.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು;


ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ದೇವಾಲಯವನ್ನು ಪ್ರತಿಷ್ಠಿಸಿದರು.


[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವನ ಆಲಯದ ಕಾವಲುಗಾರರನ್ನು ನೇವಿುಸಿದನು. ದಾವೀದನು ಆ ಯಾಜಕರನ್ನು ಯೆಹೋವನ ಆಲಯದ ಸೇವೆಗೋಸ್ಕರ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇವಿುಸಿದ ಉತ್ಸಾಹ ಗಾಯನದೊಡನೆ ಮೋಶೆಯ ಧರ್ಮಶಾಸ್ತ್ರಾನುಸಾರ ಯೆಹೋವನಿಗೆ ಸರ್ವಾಂಗಹೋಮಸಮರ್ಪಣೆ ಮಾಡುವದೇ ಅವರ ಕರ್ತವ್ಯ.


ಸರ್ವಾಂಗಹೋಮಸಮರ್ಪಣೆಯು ಪ್ರಾರಂಭಿಸಿದೊಡನೆ ಇಸ್ರಾಯೇಲ್‍ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವದೂ ತುತೂರಿಯೂದುವದೂ ಆರಂಭವಾಯಿತು.


ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ ಯೆರೂಸಲೇವಿುನ ದೇವರ ಸೇವೆಗೆ ನೇವಿುಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು