Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:9 - ಕನ್ನಡ ಸತ್ಯವೇದವು J.V. (BSI)

9 ತರುವಾಯ ಎಂಟನೆಯ ದಿನದಲ್ಲಿ ಸಭೆ ನೆರೆಯಿತು. ಹೀಗೆ ಏಳು ದಿವಸ ಯಜ್ಞವೇದಿ ಪ್ರತಿಷ್ಠೆಯನ್ನೂ ಇನ್ನು ಏಳು ದಿವಸ ಜಾತ್ರೆಯನ್ನೂ ನಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತರುವಾಯ ಎಂಟನೆಯ ದಿನದಲ್ಲಿ ಸಭೆಸೇರಿದರು. ಹೀಗೆ ಏಳು ದಿವಸ ಬಲಿಪೀಠ ಪ್ರತಿಷ್ಠೆಯನ್ನೂ ಇನ್ನು ಏಳು ದಿವಸ ಜಾತ್ರೆಯನ್ನೂ ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಂಟನೆಯ ದಿನದಲ್ಲಿ ಪರಿಶುದ್ಧ ಸಮೂಹವನ್ನು ನಡೆಸಿದರು. ಏಕೆಂದರೆ ಏಳು ದಿವಸ ಬಲಿಪೀಠದ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿವಸ ಹಬ್ಬವನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:9
10 ತಿಳಿವುಗಳ ಹೋಲಿಕೆ  

ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಕೂಡಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಕೂಡುವ ದಿನವಾದದರಿಂದ ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.


ಉಪವಾಸ ದಿನವನ್ನು ಏರ್ಪಡಿಸಿರಿ; ಸಂಘವನ್ನು ಕೂಡಿಸಿರಿ; ಹಿರಿಯರನ್ನೂ ಸಮಸ್ತ ದೇಶನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ ಯೆಹೋವನಿಗೆ ಮೊರೆಯಿಡಿರಿ.


ಎಜ್ರನು ಮೊದಲನೆಯ ದಿನದಿಂದ ಕಡೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು [ಜನರಿಗೋಸ್ಕರ] ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಿತು.


ಯೆಹೂದದ ಅರಸನಾದ ಹಿಜ್ಕೀಯನು ಸಾವಿರ ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಪ್ರಭುಗಳು ಸಾವಿರ ಹೋರಿಗಳನ್ನೂ ಹತ್ತು ಸಾವಿರ ಕುರಿಗಳನ್ನೂ ತಮಗೆ ಯಜ್ಞಕ್ಕಾಗಿ ದಾನಮಾಡಿದ್ದರಿಂದಲೂ ಯಾಜಕರಲ್ಲಿ ಬಹು ಮಂದಿ ತಮ್ಮನ್ನು ಶುದ್ಧಿಪಡಿಸಿಕೊಂಡಿದ್ದರಿಂದಲೂ


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಎರಡು ವಾರ ಅಂದರೆ ಹದಿನಾಲ್ಕು ದಿವಸಗಳವರೆಗೆ ನಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನ ಘನಕ್ಕಾಗಿ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು.


ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ದಿನದಲ್ಲಿ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಲ್ಲಿ ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ ಸೊಲೊಮೋನರಿಗೂ ಆತನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಉಂಟಾದ ಉಪಕಾರಗಳನ್ನು ನೆನಸಿಕೊಂಡು ಆನಂದಭರಿತರಾಗಿ ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿವಿುತ್ತವಾಗಿ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿಪರಿಶುದ್ಧವಾಗಿರಬೇಕು; ಯಜ್ಞವೇದಿಗೆ ಸೋಂಕಿದ್ದೆಲ್ಲವು ಪರಿಶುದ್ಧವಾಗಿರಬೇಕು.


ಇಸ್ರಾಯೇಲ್ಯರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು