Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:14 - ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾವೀದನು ಹೇಳಿದ ಪ್ರಕಾರ ಸೊಲೊಮೋನನು ಯಾಜಕರನ್ನು ಸರದಿಯ ಪ್ರಕಾರ ಸೇವೆಗೆ ನೇಮಿಸಿದನು. ಲೇವಿಯರನ್ನು ಆಯಾಕೆಲಸಕ್ಕೆ ನೇಮಿಸಿದನು. ಅವರು ಗಾಯನದಲ್ಲಿಯೂ ಯಾಜಕರ ಕೆಲಸಗಳಲ್ಲಿ ಸಹಾಯಕರಾಗಿಯೂ ದೇವಾಲಯದ ಕೆಲಸದಲ್ಲಿ ಪಾಲುತೆಗೆದುಕೊಂಡರು. ದ್ವಾರಪಾಲಕರ ಕೆಲಸಕ್ಕೆ ಸೊಲೊಮೋನನು ಜನರನ್ನು ಆರಿಸಿ ದ್ವಾರಗಳನ್ನು ಕಾಯುವುದಕ್ಕೆ ಅವರನ್ನು ನೇಮಿಸಿದನು. ದೇವಮನುಷ್ಯನಾದ ದಾವೀದನು ಹೀಗೆಯೇ ಮಾಡಬೇಕೆಂದು ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:14
33 ತಿಳಿವುಗಳ ಹೋಲಿಕೆ  

ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಇವರೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.


ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ವಿುಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹನಾನೀ ಎಂಬವರೂ ಹೋದರು. ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳು.


ಈ ಲೇವಿಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ


ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ ಯೆರೂಸಲೇವಿುನ ದೇವರ ಸೇವೆಗೆ ನೇವಿುಸಿದರು.


ದಾವೀದನಾದರೋ ತನ್ನ ಸಕಾಲದವರಿಗೆ ಸೇವೆಮಾಡಿದನಂತರ ದೈವಸಂಕಲ್ಪದಿಂದ ನಿದ್ದೆಹೋಗಿ ತನ್ನ ಪಿತೃಗಳ ಬಳಿಯಲ್ಲಿ ಇಡಲ್ಪಟ್ಟು ಕೊಳೆಯುವ ಅವಸ್ಥೆಯನ್ನು ಅನುಭವಿಸಿದನು.


ಆಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ಮಾಡಿ - ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನಗೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟವನ್ನೆಲ್ಲಾ ನೆರವೇರಿಸುವನು ಎಂಬದಾಗಿ ಅವನ ವಿಷಯದಲ್ಲಿ ಸಾಕ್ಷಿಹೇಳಿದನು.


ಹೀಗಿರಲಾಗಿ ಜಕರೀಯನ ವರ್ಗದ ಸರತಿ ಬಂದಾಗ ಅವನು ದೇವರ ಸನ್ನಿಧಿಯಲ್ಲಿ ಯಾಜಕಧರ್ಮವನ್ನು ನಡಿಸುತ್ತಿರಲು


ಯೂದಾಯದ ಅರಸನಾದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಅವನ ಹೆಂಡತಿಯು ಆರೋನನ ವಂಶದವಳು. ಆಕೆಯ ಹೆಸರು ಎಲಿಸಬೇತ್.


ಸೇವೆಯ ಸಂಬಂಧವಾದದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;


ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇವಿುಸಿದನು.


ಈಗ ನೀವು ಮಾಡತಕ್ಕದ್ದೇನಂದರೆ - ಸಬ್ಬತ್‍ದಿವಸ ದೇವಾಲಯಕ್ಕೆ ಬರತಕ್ಕ ಲೇವಿಯರಾಗಲಿ ಯಾಜಕರಾಗಲಿ ಆದ ನಿಮ್ಮಲ್ಲಿ ಮೂರರಲ್ಲೊಂದು ಭಾಗವು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.


ಕೂಡಿಬಂದಿದ್ದ ಯಾಜಕರು ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿಷಯವಾದ ಜ್ಞಾನವು ತನಗೆ ಯೆಹೋವನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ದಾವೀದನು ಮುಪ್ಪಿನ ಮುದುಕನಾದಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿ


ಹೇಮಾನ್‍ಯೆದುತೂನರ ಹತ್ತಿರ ವಾದ್ಯಗಾರರಿಗೋಸ್ಕರ ತುತೂರಿ ತಾಳ ಮೊದಲಾದ ದೇವಕೀರ್ತನಾಸಾಹಿತ್ಯಗಳಿದ್ದವು. ಯೆದುತೂನನ ಮಕ್ಕಳೂ ದ್ವಾರಪಾಲಕರಾಗಿ ನೇವಿುಸಲ್ಪಟ್ಟರು.


ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪ ಸುಡುವದಕ್ಕಾಗಿ ವೇದಿಯ ಹತ್ತಿರ ನಿಂತುಕೊಳ್ಳಲು


ಯೆಹೋವನ ಆತ್ಮವು ನನ್ನಲ್ಲಿ ಉಸುರಿತು; ಆತನ ವಾಕ್ಯವು ನನ್ನ ಬಾಯಲ್ಲಿತ್ತು.


ದೇವಪುರುಷನಾದ ಮೋಶೆ ದೇಹವನ್ನು ಬಿಡುವದಕ್ಕಿಂತ ಮುಂಚೆ ಇಸ್ರಾಯೇಲ್ಯರ ವಿಷಯವಾಗಿ ಹೇಳಿದ ಆಶೀರ್ವಾದವು ಹೇಗಂದರೆ -


ದಾವೀದನು ಯೆಹೋವನ ನಿಬಂಧನ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡಿಸುತ್ತಿರುವದಕ್ಕೋಸ್ಕರ ಆಸಾಫನನ್ನೂ ಅವನ ಸಹೋದರರನ್ನೂ


ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು - ನಾದಾಬ್, ಅಬೀಹೂ, ಎಲ್ಲಾಜಾರ್ ಈತಾಮಾರ್ ಎಂಬವರು.


ಆಮೇಲೆ ದಾವೀದನೂ ಆರಾಧಕಮಂಡಲಿಯವರ ಪ್ರಧಾನರೂ ಕಿನ್ನರಿ ಸ್ವರಮಂಡಲ ತಾಳ ಇವುಗಳನ್ನು ಬಾರಿಸುತ್ತಾ ಪರವಶರಾಗಿ ಗಾಯನ ಸೇವೆಮಾಡುವದಕ್ಕೋಸ್ಕರ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡತಕ್ಕ ಪುರುಷರ ಪಟ್ಟಿ -


ದ್ವಾರಪಾಲಕವರ್ಗಗಳ ವಿಷಯ ಕೋರಹೀಯನಾದ ಮೆಷೆಲೆಮ್ಯ ಎಂಬವನು ಕೊರೇಯನ ಮಗನೂ ಆಸಾಫನ ಮೊಮ್ಮಗನೂ.


ಅವನು ಯಾಜಕರನ್ನೂ ಲೇವಿಯರನ್ನೂ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.


ಇದಲ್ಲದೆ ಅವನು ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದ ಭಜಿಸುವದಕ್ಕೋಸ್ಕರ ಲೇವಿಯರನ್ನು ದಾವೀದ, ರಾಜದರ್ಶಿಯಾದ ಗಾದ್, ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ಇರಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.


ಇಸ್ರಾಯೇಲ್ಯರ ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ಬರೆದು ನೇವಿುಸಿದಂತೆ ನಿಮ್ಮ ನಿಮ್ಮ ಗೋತ್ರ ವರ್ಗಗಳ ಪ್ರಕಾರ ಸಿದ್ಧರಾಗಿದ್ದು


ಪೂರ್ವ ಪಶ್ಚಿಮ ಉತ್ತರ ದಕ್ಷಿಣ ಈ ದಿಕ್ಕುಗಳಲ್ಲಿರುವ ಬಾಗಲುಗಳನ್ನು ಕಾಯುವವರಾಗಿದ್ದರು.


ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರತಿಯ ಮೇಲೆ ಸೇವಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.


ಯಾವ ವಿಷಯದಲ್ಲಾದರೂ ಅಶುದ್ಧನಾದವನು ಯೆಹೋವನ ಆಲಯದಲ್ಲಿ ಸೇರದಂತೆ ಯೆಹೋಯಾದನು ಆಯಾ ಬಾಗಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.


ಆಸಾಫ್ಯರಾದ ಗಾಯಕರು ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವದಕ್ಕೆ ಕಾರಣವಿರಲಿಲ್ಲ.


ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು. (ದೇವರ ಮನುಷ್ಯನಾದ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರತಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು