Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:10 - ಕನ್ನಡ ಸತ್ಯವೇದವು J.V. (BSI)

10 ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಸೆ ರ್‍ಹಾತಾನಾ, ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮ್ಚೆ ಎಚುನ್ ಘೆಟ್ನೆ ಘಟ್ ಕರ್‍ತಲ್ಯಾ ಹುಕುಮಾಕ್ನಿ ಲೈ ಉಮ್ಮೆದ್ ಥವಾ, ಅಸೆ ಕರ್ಲ್ಯಾರ್ ತುಮಿ ಕನ್ನಾಬಿ ಅಟ್ಕಳುನ್ ಪಡಿನ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:10
31 ತಿಳಿವುಗಳ ಹೋಲಿಕೆ  

ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ಅಧರ್ಮಿಗಳ ಭ್ರಾಂತಿಯ ಸೆಳವಿಗೆ ಸಿಕ್ಕಿಕೊಂಡು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಟರಾಗದಂತೆ ಎಚ್ಚರಿಕೆಯಾಗಿರಿ.


ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ.


ಆತನು ನಿನ್ನ ಪಾದಗಳನ್ನು ಕದಲಗೊಡಿಸದಿರಲಿ; ನಿನ್ನನ್ನು ಕಾಯುವವನು ತೂಕಡಿಸದಿರಲಿ.


ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು.


ಅವನು ಎಂದೂ ಕದಲುವದಿಲ್ಲ; ನೀತಿವಂತನನ್ನು ಯಾವಾಗಲೂ ನೆನಸುವರು.


ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಆತನೇ ನನಗೆ ಶರಣನೂ ರಕ್ಷಕನೂ ದುರ್ಗವೂ; ನಾನು ಕದಲಿದರೂ ಬೀಳೆನು.


ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು ಸಬ್ಬತ್‍ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.


ಆತನೇ ನನಗೆ ಶರಣನೂ ರಕ್ಷಕನೂ ದುರ್ಗವೂ; ನಾನು ಕದಲುವದಿಲ್ಲ.


ಅವನು ಕೆಳಗೆ ಬಿದ್ದರೂ ಏಳದೆ ಹೋಗುವದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರಮಾಡುವನು.


ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು.


ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.


ಹೀಗೆ ಕರೆಯಲ್ಪಟ್ಟವರು ಬಹು ಜನ, ಆಯಲ್ಪಟ್ಟವರು ಸ್ವಲ್ಪ ಜನ ಅಂದನು.


ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.


ಯಾಕಂದರೆ ಯಾವನಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.


ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ಹಿಂದಿರುಗಿ ಬಂದು ಯೆಹೋಶುವನಿಗೆ - ಎಲ್ಲಾ ಜನರು ಹೋಗುವದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರು ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವದೇಕೆ? ಅವರು ಸ್ವಲ್ಪ ಮಂದಿ ಮಾತ್ರ ಇರುತ್ತಾರೆ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು