Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:12 - ಕನ್ನಡ ಸತ್ಯವೇದವು J.V. (BSI)

12 ಆದರೆ ಸ್ವಾಭಾವಿಕವಾಗಿ ಬೇಟೆಗೂ ಕೊಲೆಗೂ ಹುಟ್ಟಿರುವ ವಿವೇಕಶೂನ್ಯ ಪಶುಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಹೇಳುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಕೆಟ್ಟುಹೋಗಿ ತಮ್ಮ ದುಷ್ಪ್ರವರ್ತನೆಗೆ ಸರಿಯಾದ ದುಷ್ಫಲವನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆನಿ ಧರುನ್ ಜಿವ್ ಕಾಡುಕ್ ಸಾಟಿಚ್ ಜಲಮ್ ಘೆಟಲ್ಯಾ ಖ್ರುರ್ ಜನಾವರಾಂಚ್ಯಾ ಸಾರ್ಕೆ; ತೆಂಕಾ ಕಳಿನಸಲ್ಯಾ ವಿಶಯಾಚ್ಯಾ ವಿರೊಧ್ ಹೊವ್ನ್ ಬುರ್ಶೆಚ್ ಬೊಲ್ತ್ಯಾತ್ ತೆಂಕಾ ಜಾಳ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:12
17 ತಿಳಿವುಗಳ ಹೋಲಿಕೆ  

ಆದರೆ ಈ ಜನರು ತಮಗೆ ಗೊತ್ತಿಲ್ಲದ ಎಲ್ಲವನ್ನೂ ದೂಷಿಸುತ್ತಾರೆ, ಮತ್ತು ತಾವು ವಿವೇಕಶೂನ್ಯಪಶುಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


ಯೆಹೋವನೇ, ನೀನು ನನ್ನನ್ನು ತಿಳಿದಿದ್ದೀ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.


ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವದಕ್ಕೆ ಸೋತು ಹೋಗಿರುವನೋ ಅದರ ದಾಸತ್ವದೊಳಗಿರುವನಷ್ಟೆ.


ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶನವನ್ನು ಕೊಯ್ಯುವನು. ಆತ್ಮನನ್ನು ಕುರಿತು ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.


ಪಶುಪ್ರಾಯನು ಅರಿಯನು; ಹುಚ್ಚನು ತಿಳಿಯನು.


ಏಕಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ; ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು.


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಪ್ರಭಾವ ಗುಣಾತಿಶಯಗಳಿಂದ ಅಮೂಲ್ಯವಾಗಿಯೂ ಉತ್ಕೃಷ್ಟವಾಗಿಯೂ ಇರುವ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ ರೋಷಾಗ್ನಿಯನ್ನು ಊದಿ ನಿನ್ನನ್ನು ಮೃಗಪ್ರಾಯರೂ ಹಾಳುಮಾಡುವದರಲ್ಲಿ ಗಟ್ಟಿಗರೂ ಆದವರ ಕೈಗೆ ಸಿಕ್ಕಿಸುವೆನು.


ಹೀಗಿರುವಲ್ಲಿ ನಾನು - ಇವರು ಬಡವರು, ಮೂಢರು, ಯೆಹೋವನ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;


ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಹುಚ್ಚರೇ, ನಿಮಗೆ ಬುದ್ಧಿಬರುವದು ಯಾವಾಗ?


ಸುಜ್ಞಾನಿಗಳು ಸಾಯುವದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.


ಸೂಳೆಗಾರಿಕೆ ಕಳ್ಳತನ ಕೊಲೆ ಹಾದರ ದ್ರವ್ಯಾಶೆ ಕೆಡುಕುತನ ಮೋಸ ಬಂಡತನ ಹೊಟ್ಟೇಕಿಚ್ಚು ಬೈಗಳು ಸೊಕ್ಕು ಬುದ್ಧಿಗೇಡಿತನ ಇವೇ ಮೊದಲಾದವುಗಳ ಕೆಟ್ಟ ಆಲೋಚನೆಗಳು ಹೊರಡುತ್ತವೆ.


ಅದನ್ನು ಮುಟ್ಟಬೇಡ ಎನ್ನುವ ನಿಬಂಧನೆಗಳಿಗೆ ನಿಮ್ಮನ್ನು ಒಳಗಾಗಮಾಡಿಕೊಳ್ಳುವದೇಕೆ? ಆ ಪದಾರ್ಥಗಳೆಲ್ಲವೂ ಬಳಸುವದರಲ್ಲಿ ನಾಶವಾಗುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು