Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:17 - ಕನ್ನಡ ಸತ್ಯವೇದವು J.V. (BSI)

17 ಇವರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮಂಜೂ ಆಗಿದ್ದಾರೆ; ಇಂಥವರ ಪಾಲಿಗೆ ಕಾರ್ಗತ್ತಲೆ ಇಟ್ಟಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಸುಳ್ಳುಬೋಧಕರು ನೀರಿಲ್ಲದ ಒರತೆಗಳಂತಿದ್ದಾರೆ. ಅವರು ಬಿರುಗಾಳಿಯಿಂದ ಬಡಿದುಕೊಂಡು ಹೋಗುವ ಮೋಡಗಳಂತಿದ್ದಾರೆ. ಅವರಿಗಾಗಿ ಒಂದು ಕಗ್ಗತ್ತಲಾದ ಸ್ಥಳವನ್ನು ಕಾದಿರಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈ ಸುಳ್ಳು ಬೋಧಕರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ಕಾರ್ಗತ್ತಲು ಇಟ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತಿ ಲೊಕಾ ವ್ಹಾಂಕ್ಡ್ಯಾ ಝರ್ಯಾಚ್ಯಾ ಸಾರ್ಕೆ ಹಾತ್, ಅನಿ ವಾರ್‍ಯಾನ್ ಹುಡ್ವುನ್ ಘೆವ್ನ್ ಜಾತಲ್ಲ್ಯಾ ಮೊಡಾಂಚ್ಯಾ ಸಾರ್ಕೆ ಹಾತ್, ದೆವಾನ್ ತೆಚ್ಯಾ ಸಾಟ್ನಿ ದಾಟ್ ಕಾಳ್ಕಾಚೊ ಜಾಗೊ ತಯಾರ್ ಕರುನ್ ಥವಲ್ಲೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:17
11 ತಿಳಿವುಗಳ ಹೋಲಿಕೆ  

ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ನೂಕಿಸಿಕೊಂಡು ಹೋಗುವವರ ಹಾಗಿರಬಾರದು.


ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.


ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ಮತ್ತು ಕೆಲಸಕ್ಕೆ ಬಾರದ ಈ ಆಳನ್ನು ಹೊರಗೆ ಕತ್ತಲೆಗೆ ಹಾಕಿಬಿಡಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಆಮೇಲೆ ಅರಸನು ಸೇವಕರಿಗೆ - ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.


ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ.


ನೀವು ಮುಟ್ಟುವದಕ್ಕೆ ಸಾಧ್ಯವಾದಂಥ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮೋಡದ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು