Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:4 - ಕನ್ನಡ ಸತ್ಯವೇದವು J.V. (BSI)

4 ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ದೆವ್ ದುತಾಕ್ನಿ ಪಾಪ್ ಕರಲ್ಯಾ ಸಾಟ್ನಿ ನರ್ಕಾತ್ ಥವ್ಲ್ಯಾನ್ ಅನಿ ತೆಂಚಿ ಝಡ್ತಿ ಹೊಯ್ ಪತರ್ ಸರ್ಪಳಿಯಾನಿ ಭಾಂದುನ್ ತೆಂಕಾ ಕಾಳ್ಕಾತ್ ಥವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:4
25 ತಿಳಿವುಗಳ ಹೋಲಿಕೆ  

ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?


ಆಹಾ, ಉದಯನಕ್ಷತ್ರವೇ, ಬೆಳ್ಳಿಯೇ, ಆಕಾಶದಿಂದ ಹೇಗೆ ಬಿದ್ದೆ! ಜನಾಂಗಗಳನ್ನು ಕೆಡವಿದ ನೀನು ಕಡಿಯಲ್ಪಟ್ಟು ನೆಲಕ್ಕೆ ಉರುಳಿದೆಯಲ್ಲಾ!


ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗಗಳ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು.


ಆತನು ಅವರಿಗೆ - ಸೈತಾನನು ಸಿಡಿಲಿನಂತೆ ಆಕಾಶದಿಂದ ಬೀಳುವದನ್ನು ಕಂಡೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.


ಆಹಾ, ಆತನು ತನ್ನ ಪರಿಚಾರಕರಲ್ಲಿಯೂ ನಂಬಿಕೆಯನ್ನಿಡುವದಿಲ್ಲ, ತನ್ನ ದೂತರ ಮೇಲೆಯೂ ತಪ್ಪುಹೊರಿಸುತ್ತಾನೆ.


ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.


ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಮಹಾಪದವಿಯವರ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಿಲ್ಲವಲ್ಲಾ.


ಆತನು ಭಕ್ತಿಹೀನರಾದ ಪುರಾತನರ ಲೋಕವನ್ನು ಸುಮ್ಮನೆ ಬಿಡದೆ ಅವರ ಮೇಲೆ ಜಲಪ್ರಲಯವನ್ನು ಬರಮಾಡಿದನು; ಆದರೆ ಸುನೀತಿಯನ್ನು ಸಾರುವವನಾಗಿದ್ದ ನೋಹನನ್ನೂ ಅವನೊಂದಿಗೆ ಬೇರೆ ಏಳು ಮಂದಿಯನ್ನೂ ಉಳಿಸಿದನು.


ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆ ಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ, ನನ್ನನ್ನು ಕಾಡಬೇಡ ಎಂದು ಹೇಳಿದನು.


ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.


ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಕೊಡುವೆನು, ನಿನ್ನ ಅಸಹ್ಯ ಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬದು ನಿನಗೆ ಗೊತ್ತೇ ಆಗುವದು.


ಆಪತ್ತಿನ ದಿನದಲ್ಲಿ ದುಷ್ಟನು ಉಳಿದು ಕೋಪವು ತುಂಬಿ ತುಳುಕುವ ದಿವಸದಲ್ಲಿ ತಪ್ಪಿಸಲ್ಪಡುವನು ಎಂಬದು ನಿಮಗೆ ಗೊತ್ತಾಗಲಿಲ್ಲವೋ?


ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ಗರ್ವಪಡಬೇಡ, ಭಯದಿಂದಿರು; ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವದಿಲ್ಲ.


ತನ್ನ ರೌದ್ರಕ್ಕೆ ಇಂಬುಗೊಟ್ಟು ಅವರನ್ನು ಬದುಕಗೊಡದೆ ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು