Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:16 - ಕನ್ನಡ ಸತ್ಯವೇದವು J.V. (BSI)

16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಬರೆಯುವಾಗ ಹೀಗೆ ಬೋಧಿಸಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ಮಾತುಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಹೇಗೆ ನಮಗಿರುವ ವಿುಕ್ಕಾದ ಗ್ರಂಥಗಳಿಗೆ ತಪ್ಪಾದ ಅರ್ಥಮಾಡಿಕೊಂಡಿದ್ದಾರೋ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಪ್ನಾಚ್ಯಾ ಸಗ್ಳ್ಯಾ ಚಿಟಿಯಾತ್ನಿ ಹ್ಯಾ ಸಂಗ್ತಿಯಾಚ್ಯಾ ವಿಶಯಾತ್ ಬೊಲ್ತಾನಾ ತೆನಿ ಹೆಚ್ ಶಿಕ್ವಲ್ಲೆ ಹಾಯ್, ಸಮ್ಜುನ್ ಘೆವ್ಕ್ ಕಸ್ಟ್ ಹೊತಲ್ಯಾ ಉಲ್ಯ್ಲಾ ಸಂಗ್ತಿಯಾ ಹೆಚ್ಯಾ ಚಿಟಿಯಾತ್ನಿ ಹಾತ್. ಬುದ್ದ್ ನಸಲ್ಲಿ ಅನಿ ಚಂಚಲ್ ಮಾನಾಚಿ ಲೊಕಾ ಹೆಚೊ ಅರ್ಥ್ ದುಸ್ರೊಚ್ ಕಾಡ್ತಾತ್ ಅನಿ ಅಪ್ನಾಚ್ಯಾ ನಾಶಾಕ್ ಕಾರನ್ ಹೊತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:16
26 ತಿಳಿವುಗಳ ಹೋಲಿಕೆ  

ಅವನಿಗೆ ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾದದ್ದಿಲ್ಲ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿವಿುತ್ತ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.


ಈ ವಿಷಯದಲ್ಲಿ ನಾವು ಹೇಳಬೇಕಾದ ಮಾತು ಬಹಳ ಉಂಟು, ಆದರೆ ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟವಾಗಿದೆ.


ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.


ಅವನು ಎರಡು ಮನಸ್ಸುಳ್ಳವನೂ ತನ್ನ ನಡತೆಯಲ್ಲೆಲ್ಲಾ ಚಂಚಲನೂ ಆಗಿದ್ದಾನೆ.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;


ಯೆಹೋವನ ಭಾರ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಭಾರವಾಗಿರುವದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆಕೆಳಗು ಮಾಡಿದ್ದೀರಷ್ಟೆ.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದೆ ತಪ್ಪುವವರಾಗಿದ್ದೀರಿ;


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.


ಹಗಲೆಲ್ಲಾ ನನ್ನ ಮಾತುಗಳಿಗೆ ಅಪಾರ್ಥ ಮಾಡುತ್ತಾರೆ; ಅವರು ಬಗೆಯುವದೆಲ್ಲ ನನಗೆ ಕೇಡೇ.


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.


ನೀವು ಸಹ ನಿಮ್ಮ ಸಂಪ್ರದಾಯದ ನಿವಿುತ್ತ ದೇವರ ಆಜ್ಞೆಯನ್ನು ಯಾಕೆ ಮೀರುತ್ತೀರಿ?


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದರಿರುವಂಥ ಪ್ರವಾಸಿಗಳಾದ ದೇವಜನರಿಗೆ ಅಂದರೆ -


ಯೆಹೋವನಾಮ ಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬದ ರಾಣಿಯು ಕೇಳಿ ಅವನನ್ನು ಒಗಟುಗಳಿಂದ ಪರೀಕ್ಷಿಸುವದಕ್ಕೆ ಬಂದಳು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ನಿಮ್ಮಲ್ಲಿರುವ ಬಡವರು ವ್ಯಾಜ್ಯವಾಡಿದಾಗ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು. ಮೋಸದ ಕಾರ್ಯಕ್ಕೆ ದೂರವಾಗಿರಬೇಕು.


ದುಷ್ಕಾರ್ಯವನ್ನು ಮಾಡುವವರು ಬಹು ಮಂದಿ ಆದಾಗ್ಯೂ ಅವರ ಜೊತೆಯಲ್ಲಿ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಆದರೂ ದಡವನ್ನು ಮೀರಿದ ಪ್ರವಾಹದಂತಿರುವ ನೀನು ಇನ್ನು ಪ್ರಮುಖನ ಸ್ಥಾನದಲ್ಲಿ ಇರುವದಿಲ್ಲ. ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು