Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:7 - ಕನ್ನಡ ಸತ್ಯವೇದವು J.V. (BSI)

7 ಮನುಷ್ಯನಾಗಿ ಬಂದಿರುವ ಯೇಸು ಕ್ರಿಸ್ತನನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಯೇಸುವನ್ನು ಒಪ್ಪದವನು ಮೋಸಗಾರನೂ ಕ್ರಿಸ್ತವಿರೋಧಿಯೂ ಆಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ಲೋಕದಲ್ಲಿ ಅನೇಕ ಸುಳ್ಳುಬೋಧಕರಿದ್ದಾರೆ. ಯೇಸು ಕ್ರಿಸ್ತನು ಈ ಲೋಕಕ್ಕೆ ಮನುಷ್ಯನಾಗಿ ಬಂದನೆಂಬುದನ್ನು ಈ ಸುಳ್ಳುಬೋಧಕರು ಒಪ್ಪಿಕೊಳ್ಳುವುದಿಲ್ಲ. ಈ ಸತ್ಯವನ್ನು ಒಪ್ಪಿಕೊಳ್ಳದವನು ಸುಳ್ಳುಬೋಧಕನಾಗಿದ್ದಾನೆ ಮತ್ತು ಯೇಸು ಕ್ರಿಸ್ತನ ವೈರಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್, ಜೆಜು ಕ್ರಿಸ್ತ್ ಮಾನುಸ್ ಹೊವ್ನ್ ಯೆಲೊ ಮನ್ತಲೆ ಮಾನಿನಸ್ತಾನಾ, ಲೊಕಾಕ್ನಿ ಪಸ್ವುತಲಿ ಅನಿ ಕ್ರಿಸ್ತಾಕ್ ವಿರೊಧ್ ಹೊವ್ನ್ ಹೊತ್ತಿ ಲೊಕಾ ಹ್ಯಾ ಜಗಾತ್ ಪಗಳ್ಳ್ಯಾತ್. ಹೆನಿಚ್ ಪಸ್ವುತಲೆ ಅನಿ ಕ್ರಿಸ್ತಾಕ್ ವಿರೊಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:7
8 ತಿಳಿವುಗಳ ಹೋಲಿಕೆ  

ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರ ವಿಷಯವಾಗಿ ಈ ಸಂಗತಿಗಳನ್ನು ನಿಮಗೆ ಬರೆದಿದ್ದೇನೆ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು