Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:16 - ಕನ್ನಡ ಸತ್ಯವೇದವು J.V. (BSI)

16 ದಾವೀದನು - ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ; ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:16
24 ತಿಳಿವುಗಳ ಹೋಲಿಕೆ  

ಅವನನ್ನು ಕೊಲ್ಲಿಸಿದ್ದಕ್ಕೆ ನಾವೂ ನಮ್ಮ ಮಕ್ಕಳೂ ಉತ್ತರ ಕೊಡುತ್ತೇವೆ ಅಂದರು.


ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?


ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸಿದದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ನೀನು ಮಾತುಕೊಟ್ಟು ಪಾಶಕ್ಕೆ ಸಿಕ್ಕಿದ್ದೀ, ನಿನ್ನ ವಾಗ್ದಾನವು ನಿನ್ನನ್ನು ಹಿಡಿದಿದೆ.


ನೀನು ಇದನ್ನು ಬಿಟ್ಟು ಕಿದ್ರೋನ್‍ಹಳ್ಳದ ಆಚೆಗೆ ಹೋದಿಯಾದರೆ ಅದೇ ದಿವಸದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವದು ಎಂದು ಹೇಳಿದನು.


ನಾನು ಹತ್ತಿರ ಹೋಗಿ ಅವನು ಬಿದ್ದು ಬಿಟ್ಟರೆ ಬದುಕಲಾರನೆಂದು ನೆನಸಿ ಅವನನ್ನು ಕೊಂದುಹಾಕಿ ಅವನ ತಲೆಯ ಮೇಲಣ ಕಿರೀಟವನ್ನೂ ರಟ್ಟೆಯಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ ಅಂದನು.


ಆದರೆ ದಾವೀದನು - ಅವನನ್ನು ಕೊಲ್ಲಬೇಡ; ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಎಣಿಸಲ್ಪಡುವನೋ ಅಂದನು.


ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ರಕ್ತಾಪರಾಧವು ಅವರ ತಲೆಯ ಮೇಲೆಯೇ ಇರುವದು; ನಾವು ನಿರ್ದೋಷಿಗಳು. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಕೈ ಹಾಕುವದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲಿರುವದು;


ಆದಕಾರಣ ನಾನು ಈಹೊತ್ತು ಪ್ರಮಾಣವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ದೋಷವಲ್ಲ.


ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲವಷ್ಟೆ; ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.


ಸಾಲಕ್ಕೆ ಬಡ್ಡಿತೆಗೆದು ಲಾಭಕ್ಕೆ ಹಣಕೊಟ್ಟು ಬಲಾತ್ಕಾರಿಯೂ ರಕ್ತ ಸುರಿಸುವವನೂ ಆಗಿದ್ದರೆ ಬಾಳುವನೇ? ಬಾಳಲೇ ಬಾಳನು; ಈ ದುರಾಚಾರಗಳನ್ನೆಲ್ಲಾ ನಡಿಸಿದನಲ್ಲಾ; ಸತ್ತೇ ಸಾಯುವನು; ತನ್ನ ಮರಣದಂಡನೆಗೆ ತಾನೇ ಕಾರಣ.


ನಿನ್ನನ್ನು ಅಪರಾಧಿಯೆಂದು ನಿರ್ಣಯಿಸುವವನು ನಾನಲ್ಲ, ನಿನ್ನ ಬಾಯೇ, ನಿನ್ನ ತುಟಿಗಳು ಕೂಡಾ ನಿನಗೆ ವಿರುದ್ಧವಾಗಿ ಸಾಕ್ಷಿಕೊಡುತ್ತವೆ.


ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆವಿುನವರ ಮೇಲೆಯೂ ಬರುವದಕ್ಕೆ ಮಾರ್ಗವಾಯಿತು.


ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆಯಾದರೆ ಆ ದೋಷವು ನಿಮ್ಮದಾಗಿಯೇ ಇರುವದು.


ಸತ್ತವರಲ್ಲಿ ವಿಚಾರಿಸುವವರೂ ಬೇತಾಳಿಕರೂ ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಿಸಬೇಕು; ಅವಳಿಗೂ ಅದಕ್ಕೂ ಮರಣವೇ ವಿಧಿ; ಆ ಮರಣಶಿಕ್ಷೆಗೆ ತಾವೇ ಕಾರಣರು.


ಅವರು ಎದುರಿಸಿ ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ - ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಇಂದಿನಿಂದ ಶುದ್ಧಮನಸ್ಸುಳ್ಳವನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ


ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಸಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ; ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ ಅಂದನು.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿ - ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂಥ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ ಅಂದನು. ಅನಂತರ ಅವನು ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು