Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 10:18 - ಕನ್ನಡ ಸತ್ಯವೇದವು J.V. (BSI)

18 ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು; ದಾವೀದನು ಅರಾಮ್ಯರ ಏಳುನೂರು ರಥಗಳನ್ನು ಹಾಳುಮಾಡಿ ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಹತಿಸಿಬಿಟ್ಟನು; ಸೇನಾಪತಿಯಾದ ಶೋಬಕನು ಗಾಯಹೊಂದಿ ಅಲ್ಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅರಾಮ್ಯರು ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳುನೂರು ರಥ ಸಾರಥಿಗಳನ್ನು ನಾಶ ಮಾಡಿ, ನಲ್ವತ್ತು ಸಾವಿರ ಮಂದಿ ರಾಹುತರನ್ನು ಹತ್ಯೆಮಾಡಿದನು. ಸೇನಾಧಿಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೆ ಇಸ್ರಯೇಲರ ಮುಂದೆ ಸೋತು ಓಡಿಹೋದರು; ದಾವೀದನು ಸಿರಿಯಾದವರ ಏಳುನೂರು ರಥಗಳನ್ನು ಹಾಳುಮಾಡಿದನು. ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಕೊಂದನು. ಸೇನಾಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ದಾವೀದನು ಅರಾಮ್ಯರನ್ನು ಸೋಲಿಸಿದನು. ಅರಾಮ್ಯರು ಇಸ್ರೇಲರನ್ನು ಬಿಟ್ಟು ಓಡಿಹೋದರು. ದಾವೀದನು ಅರಾಮ್ಯರ ಏಳು ನೂರು ಮಂದಿ ರಥದ ಸಾರಥಿಯರನ್ನೂ ನಲವತ್ತು ಸಾವಿರ ಮಂದಿ ರಾಹುತರನ್ನೂ ಕೊಂದುಹಾಕಿದನು. ಅರಾಮ್ಯರ ಸೇನಾಪತಿಯಾದ ಶೋಬಕನನ್ನು ಸಹ ದಾವೀದನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ ಕೊಂದು, ಅವರ ಸೇನಾಧಿಪತಿಯಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 10:18
10 ತಿಳಿವುಗಳ ಹೋಲಿಕೆ  

ಅರಾಮ್ಯರು ಯುದ್ಧಕ್ಕೆ ನಿಂತಾಗ ಇಸ್ರಾಯೇಲ್ಯರ ಮುಂದೆ ಸೋತು ಓಡಿಹೋದರು. ದಾವೀದನು ಅರಾಮ್ಯರ ಏಳು ಸಾವಿರ ರಥಗಳನ್ನು ಹಾಳು ಮಾಡಿ ನಾಲ್ವತ್ತು ಸಾವಿರ ಮಂದಿ ಕಾಲಾಳುಗಳನ್ನು ಕೊಂದುಬಿಟ್ಟನು.


ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. ಸೆಲಾ.


ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.


ಅವನ ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತುಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ವಿುಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.


ಕೈಚಾಚಿ ಗೂಟವನ್ನು ತೆಗೆದುಕೊಂಡಳು; ಬಲಗೈಯಲ್ಲಿ ದೊಡ್ಡ ಕೊಡತಿಯನ್ನು ಹಿಡಿದಳು; ಆ ಕೊಡತಿಯಿಂದ ಸೀಸೆರನ ತಲೆಯನ್ನು ಒಡೆದುಬಿಟ್ಟಳು. ಅವನ ಕಣತಲೆಗೆ ತಿವಿದು ಬಡಿದಳು.


ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು - ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿಯಲ್ಪಟ್ಟಿತ್ತು.


ಆತನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯರಾಜನಾದ ಯಾಬೀನನಿಗೆ ಮಾರಿಬಿಟ್ಟನು. ಮ್ಲೇಚ್ಫರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿಯಾಗಿದ್ದನು.


ಈ ಸುದ್ದಿಯು ದಾವೀದನಿಗೆ ಮುಟ್ಟಿದಾಗ ಅವನು ಇಸ್ರಾಯೇಲ್ಯರೆಲ್ಲರನ್ನೂ ಕೂಡಿಸಿಕೊಂಡು ಯೊರ್ದನ್‍ಹೊಳೆದಾಟಿ ಹೇಲಾವಿುಗೆ ಬಂದನು. ಅರಾಮ್ಯರು ವ್ಯೂಹಕಟ್ಟಿ ದಾವೀದನೊಡನೆ ಯುದ್ಧಕ್ಕೆ ನಿಂತಾಗ


ದಾವೀದನು ಚೋಬದವರನ್ನು ಸಂಹರಿಸಿದಾಗ ಇವನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಮಂದಿಯನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.


ಹೊಗೆಯು [ಗಾಳಿಯಿಂದ] ಹೇಗೋ ಹಾಗೆ ಅವರು ಆತನಿಂದ ಹಾರಿಹೋಗುವರು; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು