Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:1 - ಕನ್ನಡ ಸತ್ಯವೇದವು J.V. (BSI)

1 ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆಹಾಕಿದರು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗು ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ವಸಂತಕಾಲದಲ್ಲಿ, ಎಲ್ಲಾ ರಾಜರೂ ಯುದ್ಧಕ್ಕೆ ಹೊರಡುವ ಸಮಯ ಬಂದಾಗ, ದಾವೀದನು ಯೋವಾಬನನ್ನೂ ಅವನ ಸೇವಕರನ್ನೂ ಮತ್ತು ಇಸ್ರೇಲರೆಲ್ಲರನ್ನೂ ಅಮ್ಮೋನಿಯರೊಂದಿಗೆ ಯುದ್ಧಮಾಡಲು ಕಳುಹಿಸಿದನು. ಯೋವಾಬನ ಸೈನ್ಯವು ರಬ್ಬಕ್ಕೆ ಮುತ್ತಿಗೆ ಹಾಕಿತು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:1
15 ತಿಳಿವುಗಳ ಹೋಲಿಕೆ  

ಮರುವರುಷ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ನಡಿಸಿ ಅಮ್ಮೋನಿಯರ ಪ್ರಾಂತಗಳನ್ನು ಹಾಳುಮಾಡಿ ರಬ್ಬಕ್ಕೆ ಹೋಗಿ ಅದಕ್ಕೆ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇವಿುನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಹಾಳುಮಾಡಿಬಿಟ್ಟನು.


ಒಂದು ವರುಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕಾಗಿ ಅಫೇಕಕ್ಕೆ ಹೋದನು.


ಆಗ ಪ್ರವಾದಿಯು ತಿರಿಗಿ ಇಸ್ರಾಯೇಲ್ಯರ ಅರಸನ ಬಳಿಗೆ ಬಂದು ಅವನಿಗೆ - ಅರಾಮ್ಯರ ಅರಸನು ಮುಂದಿನ ವರುಷದಲ್ಲಿ ಇನ್ನೊಮ್ಮೆ ನಿನಗೆ ವಿರೋಧವಾಗಿ ಬರುತ್ತಾನೆ; ಆದದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬದನ್ನು ಪರ್ಯಾಲೋಚಿಸು ಅಂದನು.


ದ್ವೇಷಿಸುವ ಸಮಯ, ಯುದ್ಧದ ಸಮಯ, ಸಮಾಧಾನದ ಸಮಯ - ಅಂತೂ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.


ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಬೆಲೆಯುಳ್ಳಸಾಮಾನುಗಳನ್ನೂ ಬಾಬೆಲಿಗೆ ತರಿಸಿಕೊಂಡು ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದದ ಮತ್ತು ಯೆರೂಸಲೇವಿುನ ಮೇಲೆ ಅರಸನನ್ನಾಗಿ ಮಾಡಿದನು.


(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ; ಅಗಲ ನಾಲ್ಕು ಮೊಳ.)


ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ ಯೆಹೂದದೊಳಗೆ ಕೋಟೆಕೊತ್ತಲಗಳಿಂದ ಕೂಡಿದ ಯೆರೂಸಲೇವಿುಗೂ ಖಡ್ಗವು ಬರುವದಕ್ಕೆ ದಾರಿಗಳನ್ನು ಮಾಡು.


ಆಗ ಯೆಹೋವನು ಹೊರಟು ಯುದ್ಧದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.


ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ಇವರು ಓಡಿಹೋಗುವದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವದನ್ನು ಬಿಟ್ಟು ಯೆರೂಸಲೇವಿುಗೆ ಹೋದನು.


ಆದದರಿಂದ ಇಗೋ, ಶತ್ರುಗಳು ನನ್ನ ಅಪ್ಪಣೆಯ ಮೇರೆಗೆ ರಬ್ಬಾ ಎಂಬ ಅಮ್ಮೋನ್ಯರ ಪಟ್ಟಣದ ಮೇಲೆ ಬಿದ್ದು ಯುದ್ಧಘೋಷಮಾಡುವ ದಿನಗಳು ಬರುವವು; ಆ ಪಟ್ಟಣವು ಹಾಳುದಿಬ್ಬವಾಗುವದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವವು; ಆಗ ಇಸ್ರಾಯೇಲು ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವದು. ಇದು ಯೆಹೋವನ ನುಡಿ.


ಹೆಷ್ಬೋನಿನವರೇ, ಗೋಳಾಡಿರಿ; ಆಯಿ ಎಂಬ ಊರು ಹಾಳಾಯಿತು! ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.


ನಾನು ರಬ್ಬದ ಕೋಟೆಯಲ್ಲಿ ಬೆಂಕಿಯನ್ನು ಉರಿಸುವೆನು, ಅದು ಅವರ ಅರಮನೆಗಳನ್ನು ನುಂಗಿಬಿಡುವದು; ಆ ಯುದ್ಧದಿನದಲ್ಲಿ ಆರ್ಭಟವಾಗುವದು. ಆ ಸುಂಟರಗಾಳಿಯ ದಿವಸದಲ್ಲಿ ರೋಷಮಾರುತವು ಬೀಸುವದು;


ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತದೊಳಗೆ ನನ್ನನ್ನು ಸೇರಿಸುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು