Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:16 - ಕನ್ನಡ ಸತ್ಯವೇದವು J.V. (BSI)

16 ಯೋವಾಬನು ಪಟ್ಟಣಕ್ಕೆ ಮುತ್ತಿಗೆಹಾಕುವಾಗ ಶೂರರಾದ ಶತ್ರುಸೈನಿಕರೆಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶತ್ರುಸೈನಿಕರು ಎಲ್ಲಿ ಪ್ರಬಲರಾಗಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಮ್ಮೋನಿಯರಲ್ಲಿ ಅತ್ಯಂತ ಧೈರ್ಯಶಾಲಿಗಳು ಆ ನಗರದಲ್ಲಿ ಎಲ್ಲಿರುವರೆಂಬುದನ್ನು ಯೋವಾಬನು ಗುರುತಿಸಿದನು. ಆ ಸ್ಥಳಕ್ಕೆ ಕಳುಹಿಸಲು ಊರೀಯನನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ಯೋವಾಬನು ಆ ಪಟ್ಟಣವನ್ನು ಮುತ್ತಿಗೆ ಹಾಕುವಾಗ, ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳಿದುಕೊಂಡು, ಅಲ್ಲಿ ಊರೀಯನನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:16
13 ತಿಳಿವುಗಳ ಹೋಲಿಕೆ  

ಪೇತ್ರನೂ ಉಳಿದ ಅಪೊಸ್ತಲರೂ - ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ ಅದು [ದೇವರ] ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.


ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ - ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಮನಸ್ಸುಳ್ಳವರಾಗಿದ್ದರೆ ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ ಎಂದು ಆಜ್ಞಾಪಿಸಿದನು. ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.


ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವದನ್ನು ಬಲ್ಲೆಯಲ್ಲಾ; ಅವನು ಇಬ್ಬರು ಇಸ್ರಾಯೇಲ್ ಸೇನಾಪತಿಗಳಾದ ನೇರನ ಮಗ ಅಬ್ನೇರನನ್ನೂ ಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತ ಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಣಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇನು ಎಂದು ಕೇಳಿದರೆ ನೀನು - ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮೃತಿಹೊಂದಿದನೆಂದು ಹೇಳು ಎಂಬದಾಗಿ


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಅದರಲ್ಲಿದ್ದದ್ದೇನಂದರೆ - ಊರೀಯನು ಗಾಯಹೊಂದಿ ಸಾಯುವಂತೆ ಅವನನ್ನು ಘೋರಯುದ್ಧ ನಡೆಯುತ್ತಿರುವ ಕಡೆಗೆ ಮುಂಭಾಗದಲ್ಲಿ ನಿಲ್ಲಿಸಿ ನೀವು ಹಿಂದಕ್ಕೆ ಸರಿದುಕೊಳ್ಳಿರಿ ಎಂಬದೇ.


ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಮಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು