Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:21 - ಕನ್ನಡ ಸತ್ಯವೇದವು J.V. (BSI)

21 ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಣಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇನು ಎಂದು ಕೇಳಿದರೆ ನೀನು - ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮೃತಿಹೊಂದಿದನೆಂದು ಹೇಳು ಎಂಬದಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೇ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ? ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ‘ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮೃತನಾದನೆಂದು ಹೇಳು,’ ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಯಾರು ಕೊಂದರೆಂಬುದು ನಿಮಗೆ ಗೊತ್ತಿಲ್ಲವೇ? ಅಬೀಮೆಲೆಕನ ಮೇಲೆ ಬೀಸುವ ಕಲ್ಲನ್ನು ನಗರದ ಗೋಡೆಯ ಮೇಲಿನಿಂದ ಎಸೆದವಳು ತೇಬೇಚಿನ ಒಬ್ಬ ಹೆಂಗಸಲ್ಲವೇ? ನೀವು ಗೋಡೆಯ ಹತ್ತಿರಕ್ಕೆ ಏಕೆ ಹೋದಿರಿ?’ ಎಂದು ಹೇಳಬಹುದು. ಆಗ ನೀನು, ‘ಹಿತ್ತಿಯನಾದ ನಿನ್ನ ಸೇವಕ ಊರೀಯನು ಸಹ ಸತ್ತುಹೋದನು’ ಎಂದು ಉತ್ತರಿಸಬೇಕು” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ‍್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:21
11 ತಿಳಿವುಗಳ ಹೋಲಿಕೆ  

ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ವಿುದ್ಯಾನ್ಯರ ದಂಡಿಳಿದಿತ್ತು.


ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ನಿನ್ನ ಕಾಲಿಗೆ ಬೇಡಿಗಳು ಬರಲಿಲ್ಲ; ನೀನು ದುಷ್ಟರಿಂದಲೋ ಎಂಬಂತೆ ಹತನಾದಿ ಎಂದು ಶೋಕಗೀತವನ್ನು ಹಾಡಲು ಜನರು ತಿರಿಗಿ ಅತ್ತರು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಆ ದಿವಸದಲ್ಲಿ ಅವನು - ಬಾಳನು ತನ್ನ ಯಜ್ಞವೇದಿಯನ್ನು ಕೆಡವಿದವನೊಡನೆ ತಾನೇ ವ್ಯಾಜ್ಯವಾಡಲಿ ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳನೆಂಬ ಹೆಸರಾಯಿತು.


ಇವರೆಲ್ಲಾ ನಿನ್ನನ್ನು ಕುರಿತು - ನೀನು ಸಹ ನಮ್ಮ ಹಾಗೆ ಬಲಹೀನನಾದೆಯಾ? ನಮಗೆ ಸರಿಸಮಾನನಾದೆಯೋ? ಎಂದು ಹೇಳುತ್ತಾರೆ.


ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆ ಮಾಡು; ಮೂರ್ಖರ ನಿಂದೆಗೆ ಗುರಿಮಾಡಬೇಡ.


ಆ ಊರಿನ ಜನರು ಹೊರಗೆ ಬಂದು ಯೋವಾಬನೊಡನೆ ಕಾದಿದಾಗ ದಾವೀದನ ಸೇವಕರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ಊರೀಯನೂ ಮಡಿದನು.


ನೀವು ಯುದ್ಧಮಾಡುವದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರುಗೋಡೆಯ ಮೇಲಣಿಂದ ಏನಾದರೂ ಬೀಸಾಡಬಹುದಲ್ಲವೋ?


ಆಜ್ಞಾಪಿಸಿ ಅವನನ್ನು ಕಳುಹಿಸಿದನು. ಆ ದೂತನು ಹೋಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು